ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಕಂಪ್ಲಿ ಶಾಸಕ ರೌಡಿ ಶೀಟರ್, ಇಲ್ಲಿದೆ ಪ್ರೂಫ್..

Published : Jan 21, 2019, 12:03 PM ISTUpdated : Jan 23, 2019, 01:59 PM IST
ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಕಂಪ್ಲಿ ಶಾಸಕ ರೌಡಿ ಶೀಟರ್, ಇಲ್ಲಿದೆ ಪ್ರೂಫ್..

ಸಾರಾಂಶ

ಆಪರೇಷನ್ ಕಮಲ ಭೀತಿಯಿಂದ ರೆಸಾರ್ಟ್ ವಾಸ್ತವ್ಯ ನಡೆಸಿದ್ದ ಕಾಂಗ್ರೆಸ್‌ನ ಶಾಸಕರಿಬ್ಬರ ಮಧ್ಯೆ ಮದ್ಯದ ಅಮಲಿನಲ್ಲಿ ಮಾರಾಮಾರಿ ನಡೆದಿದ್ದು, ಈ ಘಟನೆಯಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರು ವಿಜಯನಗರ ಶಾಸಕ ಆನಂದಸಿಂಗ್ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಗಣೇಶ್ ಹೆಸರು ಕೆಲ ವರ್ಷಗಳ ಹಿಂದೆ ರೌಡಿ ಶೀಟರ್ ಪಟ್ಟಿಯಲ್ಲಿತ್ತು ಎನ್ನುವುದು ತಿಳಿದುಬಂದಿದೆ. 

ಬಳ್ಳಾರಿ :  ‘ಮುಂಗೋಪಿ’ ಗಣೇಶ್ ಹಲ್ಲೆ ಮತ್ತಿತರ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2005 ರಲ್ಲಿ ಚಪ್ಪರದಹಳ್ಳಿ ನಗರಸಭೆ ಸದಸ್ಯ ಚಿದಾನಂದ ಎಂಬುವರ ಮೇಲೆ ಹಲ್ಲೆ ನಡೆಸಿದ್ದರು. 

ಈ ಕುರಿತು ಐಪಿಸಿ 324/ 323/ 504 ಹಾಗೂ 506 ಕಲಂ ಅಡಿ ಪ್ರಕರಣ ದಾಖಲಾಗಿತ್ತು. 2006 ರಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ ಐಪಿಸಿ 143/ 147/ 323 /353/ 504 ಕಲಂ ಅಡಿ  ಪ್ರಕರಣ ದಾಖಲಾಗಿತ್ತು. ಗಣೇಶ್ ಅವರ ಹಲ್ಲೆ ಮತ್ತಿತರ ಪ್ರಕರಣಗಳು ಸ್ಥಳೀಯರಿಗೆ ತಲೆನೋವಾಗಿ ಪರಿಣಮಿಸಿತ್ತು. 

ಈ ಸಂಬಂಧ ಅವರ ವಿರುದ್ಧ 2006 ರಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ನಂತರ 2015 ರಲ್ಲಿ ರೌಡಿಶೀಟರ್ ಫೈಲ್ ಕ್ಲೋಸ್ ಮಾಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ರಾಮನಗರದ ರೇವಣಸಿದ್ದೇಶ್ವರ ಬೆಟ್ಟದಲ್ಲಿ ದುರಂತ - ದೇವರ ದರ್ಶನಕ್ಕೂ ಮುನ್ನವೇ ಕಂದಕ ಸೇರಿದ ಭಕ್ತ!