'ಚಾಮರಾಜನಗರದಲ್ಲಿ ಸತ್ತದ್ದು 24 ಅಲ್ಲ, 34 ಮಂದಿ: ಅಧಿಕಾರಿಗಳು ಮಾಹಿತಿ ಮುಚ್ಚಿಟ್ಟಿದ್ದಾರೆ'

Published : May 03, 2021, 05:31 PM IST
'ಚಾಮರಾಜನಗರದಲ್ಲಿ ಸತ್ತದ್ದು 24 ಅಲ್ಲ, 34 ಮಂದಿ: ಅಧಿಕಾರಿಗಳು ಮಾಹಿತಿ ಮುಚ್ಚಿಟ್ಟಿದ್ದಾರೆ'

ಸಾರಾಂಶ

ಚಾಮರಾಜನಗರ ಜಿಲ್ಲಾಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರೊಬ್ಬರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ಚಾಮರಾಜನಗರ, (ಮೇ.03): ಚಾಮರಾಜನಗರ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವಪ್ಪಿರುವ ದುರ್ಘಟನೆ ನಡೆದಿದೆ. 

ಇನ್ನು ಈ ಬಗ್ಗೆ ಇಂದು (ಸೋಮವಾರ) ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಪ್ರತಿಕ್ರಿಯಿಸಿದ್ದು, ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ಸತ್ತದ್ದು 24 ರೋಗಿಗಳಲ್ಲ, 34 ಜನ. ಅಧಿಕಾರಿಗಳು ಸತ್ಯ ಮುಚ್ಚಿಟ್ಟಿದ್ದಾರೆ. ಖಚಿತ ಮಾಹಿತಿಯನ್ನು ಕೊಟ್ಟಿಲ್ಲ ಗಂಭೀರ ಆರೋಪ ಮಾಡಿದರು.

ಚಾಮರಾಜನಗರ ಆಸ್ಪತ್ರೆ ದುರಂತ: ಆಕ್ಸಿಜನ್‌ನಿಂದ ಸತ್ತಿಲ್ಲ ಎಂದು ಸರ್ಟಿಫಿಕೇಟ್ ಕೊಟ್ಟ ಸಚಿವರು

ಆರೋಗ್ಯ ಸಚಿವರು ಕೇವಲ 3 ಮಂದಿ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. 24 ಮಂದಿ ಹೊರತುಪಡಿಸಿ ಉಳಿದ 10 ಮಂದಿಯ ಹೆಸರು ಪಟ್ಟಿಯಲ್ಲಿ ಇಲ್ಲ. ಅಧಿಕಾರಿಗಳು ಸಚಿವರಿಗೆ ಸರಿಯಾದ ಮಾಹಿತಿ ನೀಡಿಲ್ಲ. ಈ ಘೋರ ದುರಂತದ ಬಗ್ಗೆ ಉನ್ನತಮಟ್ಟದಲ್ಲಿ ತನಿಖೆ ಆಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸತ್ತವರ ಕುಟಂಬಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಭಾನುವಾರ ರಾತ್ರಿ ಆಕ್ಸಿಜನ್​ ಕೊರತೆಯಿಂದ ಚಾಮರಾಜನಗರ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಸತ್ತಿದ್ದಾರೆ. 2 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕನೂ ಮೃತಪಟ್ಟಿದ್ದಾನೆ. ಈ ಘಟನೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಇತ್ತ ಪ್ರತಿಷ್ಠೆಗೆ ಅಮಾಯಕರು ಬಲಿಯಾಗಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕ ವಿಧಾನಸಭೆಯಲ್ಲಿ ಎರಡು ಮಹತ್ವದ ವಿಧೇಯಕ ಮಂಡನೆ, ಉದ್ದೇಶಗಳು ಮತ್ತು ಕಾರಣಗಳು ಯಾವುವು?
16 ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ, ಸತ್ತ ಸರ್ಕಾರದ ಮುಖ್ಯಮಂತ್ರಿ: ಪ್ರತಾಪ್ ಸಿಂಹ ವಾಗ್ದಾಳಿ