
ಬೆಂಗಳೂರು (ಮಾ.4): ಚೆನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮೇಲೆ ಲೋಕಾಯುಕ್ತ ದಾಳಿಯಾಗುವುದರೊಂದಿಗೆ ಬಿಜೆಪಿಯ ಲಂಚಾವತಾರ ಬಯಲಿಗೆ ಬಂದಿದೆ. ಈ ಕೇಸ್ನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರ ಬಂಧನವಾಗಬೇಕು ಹಾಗೂ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಕಾಂಗ್ರೆಸ್ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯ ಬಳಿಕ ಕಾಂಗ್ರೆಸ್ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಪೊಲೀಸರು ಬಂಧಿಸಿದರು. ಇದಕ್ಕೂ ಮುನ್ನ ಹಿರಿಯ ನಾಯಕರು ಪೋಸ್ಟರ್ಗಳನ್ನು ಹಿಡಿದು ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನ ಮಾಡಿದರು. ಇದನ್ನು ಪೊಲೀಸರು ತಡೆದಾಗ ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ಮಾಡಲು ಅರಂಭಿಸಿದರು. ಈ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ ಸಿದ್ಧರಾಮಯ್ಯ, ನೈತಿಕ ಹೊಣೆ ಹೊತ್ತು ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು' ಎಂದು ಹೇಳಿದರು. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧವೂ ಹರಿಹಾಯ್ದರು. 'ಮಿಸ್ಟರ್ ಅಮಿತ್ ಶಾ ಈಗ ಏನು ಹೇಳ್ತೀರಾ? ನೀವೂ ಕೂಡ ಅಧಿಕಾರದಲ್ಲಿರಲು ಲಾಯಕ್ಕಲ್ಲ. ನಿಮ್ಮದೇ ಸರ್ಕಾರದಲ್ಲಿ ಸಿಬಿಐ, ಎನ್ಐಎ ಇದೆ. ತನಿಖೆ ಮಾಡಿಸಿ ಹಣದ ಮೂಲ ಪತ್ತೆ ಮಾಡಿ' ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ