ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಗೂಂಡಾಗಳನ್ನು ಓಲೈಸುತ್ತಿದೆ: ಮಾಜಿ ಸ್ಪೀಕರ್ ಆರೋಪ

Published : Oct 04, 2023, 05:21 AM ISTUpdated : Oct 04, 2023, 05:22 AM IST
ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಗೂಂಡಾಗಳನ್ನು ಓಲೈಸುತ್ತಿದೆ: ಮಾಜಿ ಸ್ಪೀಕರ್ ಆರೋಪ

ಸಾರಾಂಶ

ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಗೂಂಡಾಗಳನ್ನು ಓಲೈಸುತ್ತಿದೆ. ಯಾರು ದೇಶದ್ರೋಹ ಕೆಲಸ ಮಾಡುತ್ತಿದ್ದಾರೆ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೋ ಅವರಿಗೆ ಕಾಂಗ್ರೆಸ್ ಕುಮ್ಮಕ್ಕು ಕೊಡುತ್ತಿದೆ ಎಂದು ಮಾಜಿ ಶಾಸಕ, ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಆರೋಪಿಸಿದ್ದಾರೆ.

ಮಡಿಕೇರಿ (ಅ.4) : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಗೂಂಡಾಗಳನ್ನು ಓಲೈಸುತ್ತಿದೆ. ಯಾರು ದೇಶದ್ರೋಹ ಕೆಲಸ ಮಾಡುತ್ತಿದ್ದಾರೆ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೋ ಅವರಿಗೆ ಕಾಂಗ್ರೆಸ್ ಕುಮ್ಮಕ್ಕು ಕೊಡುತ್ತಿದೆ ಎಂದು ಮಾಜಿ ಶಾಸಕ, ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಆರೋಪಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೂಂಡಾಗಳನ್ನು ಓಲೈಸುತ್ತಿದೆ ಎಂಬುದಕ್ಕೆ ಮೊನ್ನೆ ಶಿವಮೊಗ್ಗದ ರಾಗಿಗುಡ್ಡೆಯಲ್ಲಿ ನಡೆದ ಘಟನೆಯೇ ಸಾಕ್ಷಿ. ಮುಸಲ್ಮಾನರನ್ನು ಓಲೈಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಹಿಂದೆ ಡಿಜೆಹಳ್ಳಿ, ಕೆಜೆ ಹಳ್ಳಿಯಲ್ಲಿ ಎಂಎಲ್ಎ ಮನೆಯನ್ನೇ ಸರ್ವನಾಶ ಮಾಡಿದವರು. ಅವರ ಮೇಲಿನ ಕೇಸನ್ನು ವಾಪಸ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಗಂಭೀರ ಪ್ರಕರಣವನ್ನು ವಾಪಸ್ ಪಡೆಯಲು ಯತ್ನಿಸುತ್ತಿದೆ. ಗಂಭೀರ ಪ್ರಕರಣವನ್ನು ವಾಪಸ್ ಪಡೆಯುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಎನ್ಐಎ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿರುವ ಪ್ರಕರಣವನ್ನು ವಾಪಸ್ ಪಡೆಯುವುದು ಸರಿಯಲ್ಲ.

ಬೆಂಗಳೂರಿನಲ್ಲಿ ರೌಡಿಗಳ ಪುಂಡಾಟ; ಗಲಾಟೆ ಮಾಡಬೇಡಿ ಎಂದವನಿಗೆ ಮಾರಕಾಸ್ತ್ರದಿಂದ ಹಲ್ಲೆ!

ಇದು ಅತ್ಯಂತ ಜನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೆಲಸ. ಇವರು ಕಾನೂನು ಸುವ್ಯವಸ್ಥೆ ಹೇಗೆ ಕಾಪಾಡುತ್ತಾರೆ ಎಂದು ಬೋಪಯ್ಯ ಪ್ರಶ್ನಿಸಿದರು.

ಪುಂಡರಿಗೆ, ಗೂಂಡಾಗಳಿಗೆ, ದೇಶದ್ರೋಹಿಗಳಿಗೆ ಉತ್ತೇಜನ ಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಅಧಿಕಾರಿಗಳು ಕಾನೂನಿನಂತೆ ಕೆಲಸ ಮಾಡಲಿ. ಇಲ್ಲದಿದ್ದರೆ ಮುಂದೆ ನಿಮಗೂ ತೊಂದರೆಯಾಗಲಿದೆ.ಅಧಿಕಾರ ಇದೆಯೆಂದು ಇಂತಹ ಗಂಭೀರ ಪ್ರಕರಣಗಳನ್ನು ವಾಪಸ್ ಪಡೆಯಬಾರದು. ಇದರ ಬಗ್ಗೆ ಕಾಂಗ್ರೆಸ್ ಸರ್ಕಾರ ಯೋಚಿಸಲಿ. ಅದರಲ್ಲೂ ಗೃಹ ಸಚಿವರು ಮತ್ತು ಉಪಮುಖ್ಯಮಂತ್ರಿ ಯೋಚಿಸಲಿ ಎಂದು ಬೋಪಯ್ಯ ಹೇಳಿದರು.

ಬಿಹಾರದಂತೆ ರಾಜ್ಯದಲ್ಲೂ ಜಾತಿಗಣತಿ ಜಾರಿಗೆ ಸಿಎಂ ನಿರ್ಧರಿಸಬೇಕು: ಸತೀಶ ಜಾರಕಿಹೊಳಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌