ಅಂಗವಿಕಲ ದಲಿತನ ಜಾಗದಲ್ಲಿ ಸಿದ್ದು ಮನೆ ನಿರ್ಮಾಣ: ಕುಮಾರಸ್ವಾಮಿ

Published : Sep 15, 2024, 06:23 AM IST
ಅಂಗವಿಕಲ ದಲಿತನ ಜಾಗದಲ್ಲಿ ಸಿದ್ದು ಮನೆ ನಿರ್ಮಾಣ: ಕುಮಾರಸ್ವಾಮಿ

ಸಾರಾಂಶ

ಮುಡಾದಿಂದ ಹಂಚಿಕೆಯಾಗಿದ್ದ ದಲಿತರೊಬ್ಬರ ನಿವೇಶನ ಕಬಳಿಸಿ ಮನೆ ಕಟ್ಟಿಸಿದ್ದಾರೆ. ಬಳಿಕ ಆ ಮನೆಯನ್ನು ಮಾರುವ ನಾಟಕವಾಡಿ ಸಿಕ್ಕಿಬಿದ್ದಿದ್ದಾರೆ. ಈ ಕುರಿತ ದಾಖಲೆಗಳು ನನ್ನ ಬಳಿ ಇವೆ ಎಂದ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ 

ಬೆಂಗಳೂರು(ಸೆ.15):  ಮುಡಾ ಹಗರಣ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮತ್ತೊಂದು ಭೂ ಕಬಳಿಕೆ ಆರೋಪವನ್ನು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾಡಿದ್ದು, ಉಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಂಗವಿಕಲ ದಲಿತರೊಬ್ಬರ ಜಾಗದಲ್ಲಿ ಮನೆ ಕಟ್ಟಿದ್ದರು ಎಂಬ ಗಂಭೀರ ಆರೋಪ ಮಾಡಿದ್ದಾರೆ. 

ಶನಿವಾರ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾದಿಂದ ಹಂಚಿಕೆಯಾಗಿದ್ದ ದಲಿತರೊಬ್ಬರ ನಿವೇಶನ ಕಬಳಿಸಿ ಮನೆ ಕಟ್ಟಿಸಿದ್ದಾರೆ. ಬಳಿಕ ಆ ಮನೆಯನ್ನು ಮಾರುವ ನಾಟಕವಾಡಿ ಸಿಕ್ಕಿಬಿದ್ದಿದ್ದಾರೆ. ಈ ಕುರಿತ ದಾಖಲೆಗಳು ನನ್ನ ಬಳಿ ಇವೆ ಎಂದರು.

Channapatna Byelection: ಚನ್ನಪಟ್ಟಣ ಸೋತ್ರೆ ಕುಮಾರಸ್ವಾಮಿಗೆ ಹಿನ್ನಡೆ, ಯೋಗೇಶ್ವರ್‌

ಅಂಗವಿಕಲ ದಲಿತ ವ್ಯಕ್ತಿಯೊಬ್ಬರ ಬಳಿ 24 ಸಾವಿರ ರು. ಕಟ್ಟಿಸಿಕೊಂಡು ಮುಡಾ ನಿವೇಶನ ಹಂಚಿಕೆ ಮಾಡಲಾಗಿತ್ತು. ಆ ಜಾಗದ ಸುಳ್ಳು ದಾಖಲೆ ಸೃಷ್ಟಿ ಮಾಡಿಕೊಂಡು ಸಾಕಮ್ಮ ಎಂಬುವವರ ಹೆಸರಿನಲ್ಲಿ 10 ಸಾವಿರ ಚದರ ಅಡಿ ಜಾಗದಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡರು. ಆಮೇಲೆ ನಿವೇಶನದ ಮಾಲೀಕರು ಬಂದು ನೋಡಿದರೆ ಅಲ್ಲಿ ಮನೆ ನಿರ್ಮಿಸಲಾಗಿತ್ತು ಎಂದು ಹೇಳಿದರು. 

ನನ್ನ ಜೀವನ ತೆರೆದ ಪುಸ್ತಕ ಎಂದು ಯಾವಾಗಲೂ ಹೇಳುತ್ತಾರೆ. ಅವರ ಆ ತೆರೆದ ಪುಸ್ತಕವನ್ನು ಜನ ಒಮ್ಮೆ ತೆರೆದು ನೋಡಬೇಕು. ನಿವೇಶನ ಲಪಟಾಯಿಸಿಕೊಂಡವರು, ಅಕ್ರಮವಾಗಿ ಮನೆ ಕಟ್ಟಿಕೊಂಡರು, ನಂತರ ಅದನ್ನು ಯಾರಿಗೆ ಮಾರಾಟ ಮಾಡಿದರು? ಎಂಬುದು ಗೊತ್ತಿದೆ. ಎಲ್ಲವನ್ನೂ ತೆಗೆದು ನೋಡಿದರೆ ಅಸಲಿ ಬಣ್ಣ ಗೊತ್ತಾಗುತ್ತದೆ. ಆಗ ಇನ್ನೊಂದು ಹಗರಣ ಶುರುವಾಗುತ್ತದೆ ಎಂದು ಕಿಡಿಕಾರಿದರು. 

ಹಾಲಿಗೆ ಪ್ರೋತ್ಸಾಹಧನ ನಾನೇ ಕೊಟ್ಟಿದ್ದು ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಪ್ರೋತ್ಸಾಹ ಧನ ನೀಡುವ ಚಿಂತನೆ ಮಾಡಿ, ಎರಡು ರು. ನೀಡುವ ಕೊಡುವ ವ್ಯವಸ್ಥೆ ಜಾರಿ ಮಾಡಿದ್ದು, ಅದನ್ನು ನಾನು ಎರಡನೇ ಬಾರಿ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ 6 ರು. ಮಾಡಬೇಕು ಎಂದು ತೀರ್ಮಾನಿಸಿದ್ದೆ. ಆಗ ನೀವೆಲ್ಲ ಸೇರಿ ಸರ್ಕಾರ ಪತನಗೊಳಿಸಿದಿರಿ ಎಂದು ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌