ಸಣ್ಣ ಗುತ್ತಿಗೆದಾರರಿಗೆ ಗುಡ್‌ನ್ಯೂಸ್: ದೊಡ್ಡ ಕಂಪನಿಗಳಿಗೆ ಗುತ್ತಿಗೆ ನೀಡುವ ಯತ್ನಕ್ಕೆ ಇತಿಶ್ರೀ

Published : Jan 04, 2021, 09:13 AM IST
ಸಣ್ಣ ಗುತ್ತಿಗೆದಾರರಿಗೆ ಗುಡ್‌ನ್ಯೂಸ್: ದೊಡ್ಡ ಕಂಪನಿಗಳಿಗೆ ಗುತ್ತಿಗೆ ನೀಡುವ ಯತ್ನಕ್ಕೆ ಇತಿಶ್ರೀ

ಸಾರಾಂಶ

.5 ಲಕ್ಷವರೆಗಿನ ಕಾಮಗಾರಿಗಳ ಗುತ್ತಿಗೆ | ದೊಡ್ಡ ಕಂಪನಿಗಳಿಗೆ ಗುತ್ತಿಗೆ ನೀಡುವ ಯತ್ನಕ್ಕೆ ಇತಿಶ್ರೀ

ಬೆಂಗಳೂರು(ಜ.04): ಕೊನೆಗೂ ಎಚ್ಚೆತ್ತುಕೊಂಡ ಬೆಸ್ಕಾಂ ಸಂಸ್ಥೆಯು .5 ಲಕ್ಷವರೆಗಿನ ವಿದ್ಯುತ್‌ ಪೂರೈಕೆಯ ಸುಧಾರಣೆ ಹಾಗೂ ನಿರ್ವಹಣೆ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಲು ಬೆಸ್ಕಾಂನ ವಿವಿಧ ಹಂತದ ಅಧಿಕಾರಿಗಳಿಗೆ ಹಣಕಾಸು ಅಧಿಕಾರವನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ವಿವಿಧ ಎಸ್ಕಾಂಗಳ ವ್ಯಾಪ್ತಿಯಲ್ಲಿ .5 ಲಕ್ಷದೊಳಗಿನ ಕಾಮಗಾರಿಗಳನ್ನು ಎಸ್‌.ಆರ್‌. ದರದಂತೆ (ಶೆಡ್ಯೂಲ್‌ ದರ) ಸ್ಥಳೀಯ ಗುತ್ತಿಗೆದಾರರಿಗೆ ನೀಡುವಂತೆ ಅ.29ರಂದು ಮುಖ್ಯಮಂತ್ರಿಗಳೇ ಆದೇಶಿಸಿದ್ದರು. ಆದೇಶದಲ್ಲಿ ಎಸ್‌.ಆರ್‌. ದರದ ಅನ್ವಯ ನೀಡುವ ಕಾಮಗಾರಿಯ ಮಿತಿಯನ್ನು .1 ಲಕ್ಷಗಳಿಂದ .5 ಲಕ್ಷಕ್ಕೆ ಹೆಚ್ಚಳ ಮಾಡಿದ್ದರು. ಈ ಆದೇಶವನ್ನು ಎಲ್ಲಾ ಎಸ್ಕಾಂಗಳು ಅನುಷ್ಠಾನಕ್ಕೆ ತಂದರೂ ಬೆಸ್ಕಾಂ ತಂದಿರಲಿಲ್ಲ. ಬದಲಾಗಿ ಬೃಹತ್‌ ಕಂpನಿಗಳಿಗೆ ದುಪ್ಪಟ್ಟು ದರಕ್ಕೆ ಟೆಂಡರ್‌ ನೀಡಲು ಸಜ್ಜಾಗಿತ್ತು.

ಕೊರಿಯನ್ ಮಾದರಿಗೆ ಕೋರಮಂಗಲ ರಾಜ ಕಾಲುವೆ ಅಭಿವೃದ್ಧಿ! ಸ್ವಚ್ಛ ನೀರು, ಸುಂದರ ಉದ್ಯಾನ

ಹೀಗಾಗಿ ‘ಮುಖ್ಯಮಂತ್ರಿಗಳ ಆದೇಶಕ್ಕೂ ಕ್ಯಾರೆ ಎನ್ನದ ಬೆಸ್ಕಾಂ’ ಎಂಬ ಶೀರ್ಷಿಕೆಯಲ್ಲಿ ನಿರ್ಲಕ್ಷ್ಯದ ಬಗ್ಗೆ ಜ.1 ರಂದು ಕನ್ನಡಪ್ರಭ ವಿಶೇಷ ವರದಿ ಪ್ರಕಟಿಸಿತು. ಇದರ ಬೆನ್ನಲ್ಲೇ ಜ.2 ರಂದು ಆದೇಶ ಹೊರಡಿಸಿರುವ ಬೆಸ್ಕಾಂ .1 ಲಕ್ಷಗಳಿಂದ .5 ಲಕ್ಷವರೆಗಿನ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಲು ಅನುವಾಗುವಂತೆ ವಿವಿಧ ಹಂತದ ಅಧಿಕಾರಿಗಳಿಗೆ ಹಣಕಾಸು ಜವಾಬ್ದಾರಿಯನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.

ಎಲೆಕ್ಟ್ರಿಕಲ್‌ ಮತ್ತು ಸಿವಿಲ್‌ ಕಾಮಗಾರಿಗಳ ಎಸ್‌ಆರ್‌ ದರ (ಶೆಡ್ಯೂಲ್‌ ದರ) ಅಥವಾ ಅದಕ್ಕಿಂತ ಕಡಿಮೆ ದರದಲ್ಲಿ ಬೆಸ್ಕಾಂ, ಲೋಕೋಪಯೋಗಿ ಇಲಾಖೆ ಎಸ್‌.ಆರ್‌. ದರದಂತೆ ಗುತ್ತಿಗೆ ನೀಡಿ ಕೆಲಸ ಮಾಡಿಸಬಹುದು. ಇದಕ್ಕಾಗಿ ಮುಖ್ಯ ಪ್ರಧಾನ ವ್ಯವಸ್ಥಾಪಕರು ಅಥವಾ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ .1 ಲಕ್ಷಗಳಿಂದ .5 ಲಕ್ಷ, ಪ್ರಧಾನ ವ್ಯವಸ್ಥಾಪಕರು ಅಥವಾ ಸೂಪರಿಂಡೆಂಟ್‌ ಇ.ಇ.ಗೆ .1 ಲಕ್ಷಗಳಿಂದ .4 ಲಕ್ಷ, ಕಾರ್ಯ ನಿರ್ವಾಹಕ ಎಂಜಿನಿಯರ್‌ಗೆ .1 ಲಕ್ಷಗಳಿಂದ .3 ಲಕ್ಷ ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ .50 ಸಾವಿರವರೆಗಿನ ಕಾಮಗಾರಿಗಳನ್ನು ಮಂಜೂರು ಮಾಡುವುದು ಹಾಗೂ ಹಣ ಬಿಡುಗಡೆ ಮಾಡುವ ಅಧಿಕಾರವನ್ನು ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ