ತ್ರಿಕಾಲ ಜ್ಞಾನಿ ಸ್ವಾಮಿಗಳೇ ಹೀಗೆ ಮಾಡಿದರೆ ಹೇಗೆ? ನ್ಯಾಯಾಂಗ ನಿಂದನೆ ಮಾಡಿದ ಶ್ರೀಗಳ ವಿರುದ್ಧ ಹೈಕೋರ್ಟ್ ಅಸಮಾಧಾನ 

Published : Dec 21, 2023, 05:22 PM IST
ತ್ರಿಕಾಲ ಜ್ಞಾನಿ ಸ್ವಾಮಿಗಳೇ ಹೀಗೆ ಮಾಡಿದರೆ ಹೇಗೆ? ನ್ಯಾಯಾಂಗ ನಿಂದನೆ ಮಾಡಿದ  ಶ್ರೀಗಳ ವಿರುದ್ಧ ಹೈಕೋರ್ಟ್ ಅಸಮಾಧಾನ 

ಸಾರಾಂಶ

ನ್ಯಾಯಾಲಯ ಮತ್ತು ನ್ಯಾಯಮೂರ್ತಿಗಳ ಬಗ್ಗೆ ಹಗುರುವಾಗಿ ಮಾತನಾಡಿದ್ದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ರಾಮಲಿಂಗೇಶ್ವರಮಠದ ಪೀಠಾಧಿಪತಿ ಶ್ರೀ ನೀಲಕಂಠ ಸಾರಂಗ ದೇಶಿಕೇಂದ್ರ ಮಹಾ ಸ್ವಾಮೀಜಿ ಅವರ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿರುವ ಹೈಕೋರ್ಟ್, ನಿಮ್ಮಂಥ ತ್ರಿಕಾಲಜ್ಞಾನ ಸ್ವಾಮೀಜಿಗಳು ಹೀಗೆ ಮಾಡಿದರೆ ನ್ಯಾಯಾಲಯ ಎಲ್ಲಿಗೆ ಹೋಗಬೇಕು ಎಂದು ಕಟುವಾಗಿ ಪ್ರಶ್ನಿಸಿದೆ.

ಬೆಂಗಳೂರು (ಡಿ.21): ನ್ಯಾಯಾಲಯ ಮತ್ತು ನ್ಯಾಯಮೂರ್ತಿಗಳ ಬಗ್ಗೆ ಹಗುರುವಾಗಿ ಮಾತನಾಡಿದ್ದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ರಾಮಲಿಂಗೇಶ್ವರಮಠದ ಪೀಠಾಧಿಪತಿ ಶ್ರೀ ನೀಲಕಂಠ ಸಾರಂಗ ದೇಶಿಕೇಂದ್ರ ಮಹಾ ಸ್ವಾಮೀಜಿ ಅವರ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿರುವ ಹೈಕೋರ್ಟ್, ನಿಮ್ಮಂಥ ತ್ರಿಕಾಲಜ್ಞಾನ ಸ್ವಾಮೀಜಿಗಳು ಹೀಗೆ ಮಾಡಿದರೆ ನ್ಯಾಯಾಲಯ ಎಲ್ಲಿಗೆ ಹೋಗಬೇಕು ಎಂದು ಕಟುವಾಗಿ ಪ್ರಶ್ನಿಸಿದೆ.

ಸ್ವಾಮೀಜಿಗಳ ವಿರುದ್ಧ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ|ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಅತೃಪ್ತಿ ವ್ಯಕ್ತಪಡಿಸಿತು. ನ್ಯಾಯಾಲಯದ ಬಗ್ಗೆ ಹಗುರವಾಗಿ ಸಾಮಾನ್ಯ ಮನುಷ ಮನುಷ್ಯ ಮಾತನಾಡಿದ್ದರೆ ಅದನ್ನು ನಾವು ಅರ್ಥ ಮಾಡಿ ಕೊಳ್ಳುತ್ತಿದ್ದೆವು. ನೀವು ತ್ರಿಕಾಲ ಜ್ಞಾನಿಗಳು ಹಿಂದೂ ಧರ್ಮ

 

‘ಪೇ ಚಲುವ’ ಭಿತ್ತಿಪತ್ರ ಕೇಸಿನ ವಿಚಾರಣೆಗೆ ಹೈಕೋರ್ಟ್‌ ತಡೆ

ಹಾಗೂ ಇತ್ಯಾದಿ ನಂಬಿಕೆಗಳನ್ನು ಪಾಲಿಸುವಲ್ಲಿ ಸ್ವಾಮೀಜಿ ಬಹಳ ಬ್ಯುಸಿಯಾಗಿ ಇರುತ್ತಾರೆ. ಹಿಂದೂ ಧರ್ಮ, ಶ್ಲೋಕ ಮತ್ತು ಮಂತ್ರಗಳಲ್ಲಿ ನ್ಯಾಯಾಧೀಶ ಪ್ರತ್ಯಕ್ಷ ದೇವತಾಃ ಹಾಗೂ ನ್ಯಾಯಸ್ಥಾನಕ್ಕೆ ಗೌರವ ಕೊಡಬೇಕು ಎಂದು ಹೇಳುತ್ತದೆ. ಹಾಗಾದರೆ ನ್ಯಾಯಾಧೀಶರು ಹಿಂದೂ ಧರ್ಮದ ಭಾಗವಲ್ಲವೇ, ಸ್ವಾಮೀಜಿ ಏಕೆ ಗೌರವ ಕೊಡಲಿಲ್ಲ ಎಂದು ನ್ಯಾಯಪೀಠ ತೀಕ್ಷವಾಗಿ ಕೇಳಿತು.

 ಸ್ವಾಮೀಜಿ ಏನು ಹೇಳುತ್ತಾರೋ, ಅವರ ಭಕ್ತರು ಅದನ್ನೇ ಮಾಡುತ್ತಾರೆ. ನ್ಯಾಯಾಧೀ ಶರು ನ್ಯಾಯಾಂಗದ ಭಾಗ. ಗೌರವವನ್ನು ನ್ಯಾಯಾಲಯಕ್ಕೆ ನೀಡಲಾಗುತ್ತದೆಯೇ ವಿನಾ ವ್ಯಕ್ತಿಗಲ್ಲ. ನ್ಯಾಯಾಂಗದ ಬಗ್ಗೆ ನಾವು ಕಾಳಜಿ ಹೊಂದಿದ್ದೇವೆ. ಹಾಗಾಗಿ, ನ್ಯಾಯಾಲಯವನ್ನು ಗೌರವಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಸೂಚಿಸಿದರು.

ಬೆಳಗಾವಿ ಮಹಿಳೆಗೆ ಹಲ್ಲೆ ಪ್ರಕರಣ: ಮೂಕಪ್ರೇಕ್ಷಕರಾಗಿದ್ದ ಗ್ರಾಮಸ್ಥರಿಗೆ 'ಪುಂಡ ದಂಡ' ಸಂಗ್ರಹಿಸಿ; ಸರ್ಕಾರಕ್ಕೆ ಹೈಕೋರ್ಟ್ ಸಲಹೆ

ಅಂತಿಮವಾಗಿ ಸಾಮೀಜಿ ಕಮೆ ಕೋರಿದ ಹಿನ್ನೆಲೆ ಅವರು ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟ ಹೈಕೋರ್ಟ್. ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್