ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾಗಿ ಡಾ. ಸಿ.ಎನ್. ಮಂಜುನಾಥ್ ಮುಂದುವರಿಕೆ: ಸಾಧನೆಗೆ ಬಾಗಿದ ಸರ್ಕಾರ

Published : Jul 17, 2023, 06:41 PM ISTUpdated : Jul 17, 2023, 07:17 PM IST
ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾಗಿ ಡಾ. ಸಿ.ಎನ್. ಮಂಜುನಾಥ್ ಮುಂದುವರಿಕೆ: ಸಾಧನೆಗೆ ಬಾಗಿದ ಸರ್ಕಾರ

ಸಾರಾಂಶ

ಡಾ.ಸಿ.ಎನ್. ಮಂಜುನಾಥ್‌ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾಗಿ ಮುಂದಿನ 6 ತಿಂಗಳ ಕಾಲ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರು (ಜು.17): ರಾಜ್ಯದಲ್ಲಿ ಕಡಿಮೆ ದರದಲ್ಲಿ ಅತ್ಯಂತ ಗುಣಮಟ್ಟದ ಹೃದ್ರೋಗ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಿ ಪ್ರಸಿದ್ಧಿಯಾಗಿರುವ ಡಾ.ಸಿ.ಎನ್. ಮಂಜುನಾಥ್‌ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾಗಿ ಮುಂದಿನ 6 ತಿಂಗಳ ಕಾಲ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ.

ಈ ಕುರಿತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾಗಿ ಡಾ ಸಿಎನ್ ಮಂಜುನಾಥ್ ಮುಂದುವರಿಕೆ ಮಾಡಲು ನಿರ್ಧಾರ ಕೈಕೊಂಡಿದ್ದಾರೆ. ಡಾ ಸಿಎನ್ ಮಂಜುನಾಥ್ ಮುಂದುವರೆಸುವಂತೆ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ಕ್ರಮ ಕೈಗೊಳ್ಳಲಾಗಿದೆ. ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆ ಕೆಲಸ ಜವಾಬ್ದಾರಿ ಮುಗಿಸಲಿರುವ ಹಿನ್ನಲೆಯನ್ನು ಅವರನ್ನು ಮುಂದುವರಿಸಲು ನಿರ್ಧಾರ ಮಾಡಲಾಗಿದೆ.

Temple Mobile Ban:ಕರ್ನಾಟಕದ ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ನಿಷೇಧ

ಇನ್ನು ಡಾ.ಸಿ.ಎನ್. ಮಂಜುನಾಥ್‌ ಅವರ ಸೇವಾವಧಿ ಜು.19ಕ್ಕೆ ಪೂರ್ಣಗೊಳ್ಳಲಿತ್ತು. ಆದರೆ, ಈ ಅವಧಿ ಪೂರ್ಣಗೊಂಡ ಬೆನ್ನಲ್ಲೇ ಹಲವು ವೈದ್ಯಾಧಿಕಾರಿಗಳಿಂದ ನಿರ್ದೇಶಕರ ಹುದ್ದೆಗೆ ಭಾರಿ ಲಾಭಿ ಉಂಟಾಗುವ ಸಾಧ್ಯತೆಯಿದೆ ಎಂದರಿತ ಕಾಂಗ್ರೆಸ್‌ ಸರ್ಕಾರ ಜನವರಿ ತಿಂಗಳವರೆಗೆ ಡಾ. ಮಂಜುನಾಥ್ ಅವರನ್ನೇ ನಿರ್ದೇಶಕರಾಗಿ ಮುಂದುವರೆಸಲು ಮುಂದಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರವೂ ಕೂಡ ಡಾ.ಸಿ.ಎನ್. ಮಂಜುನಾಥ್‌ ಅವರು ಸೇವಾವಧಿ ವಿಸ್ತರಣೆ ಮಾಡಿತ್ತು. ಪ್ರಸ್ತುತ ಸೇವಾವಧಿ ವಿಸ್ತರಣೆಯಲ್ಲಿ ಸೇವೆ ಮಾಡುತ್ತಿರುವ ಮಂಜುನಾಥ್‌ ಅವರಿಗೆ ಮತ್ತಷ್ಟು ತಿಂಗಳ ಕಾಲ ನಿರ್ದೇಶಕರಾಗಿ ಸೇವೆ ಮಾಡಲು ಅವಕಾಶ ಒದಗಿ ಬಂದಿದೆ.

ಬಿಜೆಪಿ ಸರ್ಕಾರದಿಂದ ಒಂದು ವರ್ಷ ಮುಂದುವರಿಕೆ: ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಯದೇವ ಆಸ್ಪತ್ರೆ (Jayadeva Hospital) ನಿರ್ದೇಶಕರಾಗಿ (Director) ಸೇವಾ ಅವಧಿ ಪೂರ್ಣಗೊಳ್ಳುತ್ತಿದ್ದ ಡಾ.ಸಿ.ಎನ್.ಮಂಜುನಾಥ್ (C N Manjunath) ಸೇವೆಯನ್ನು ಒಂದು ವರ್ಷಗಳ ಕಾಲ ಸೇವೆ ಮುಂದುವರಿಸಲು ಆದೇಶ ಹೊರಡಿಸಿದ್ದರು. ಇನ್ನು ಮುಂದುವರಿಕೆ ಅವಧಿ ಜು.19ಕ್ಕೆ ಪೂರ್ಣಗೊಳ್ಳಬೇಕಿತ್ತು. ಆದರೆ, ಕಲಬುರಗಿಯಲ್ಲಿ ಆಸ್ಪತ್ರೆ ನಿರ್ಮಾಣದ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರನ್ನೇ ಮುಂದುವರಿಕೆ ಮಾಡಲಾಗಿದೆ. ಮುಖ್ಯಮಂತ್ರಿಗಳು ಡಾ. ಸಿ. ಎನ್ ಮಂಜುನಾಥ್ ಅವರ ಸಾಧನೆ ಮತ್ತು ಆಡಳಿತ ವೈಖರಿ ಪರಿಗಣಿಸಿ, ಪುನಃ 6 ತಿಂಗಳು ಮುಂದುವರೆಸಲು ನಿರ್ಧರಿಸಲಾಗಿದೆ.  ಈ ಹಿನ್ನೆಲೆ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರಿಗೆ ಡಾ‌. ಸಿ ಎನ್ ಮಂಜುನಾಥ್  ಅಭಿನಂದನೆ ತಿಳಿಸಿದ್ದಾರೆ.

Bengaluru PES College: ಪರೀಕ್ಷೆಯಲ್ಲಿ ಕಾಪಿ ಮಾಡ್ತಿದ್ದ ವಿದ್ಯಾರ್ಥಿಗೆ ಅವಮಾನ: 14ನೇ ಮಹಡಿಯಿಂದ ಬಿದ್ದು ಸಾವು

2022ರ ಅಂತ್ಯಕ್ಕೆ ಡಾ.ಸಿ.ಎನ್. ಮಂಜುನಾಥ್ ಅವರ ಸಾಧನೆಗಳು
- 5,27,437 ಹೊರ ರೋಗಿಗಳನ್ನು ನೋಡಿದ್ದಾರೆ
- 53,806 ರಲ್ಲಿ - 30,000 ರೋಗಿಗಳಿಗೆ ಸಬ್ಸಿಡಿ ವೆಚ್ಚವಾಗಿ ಚಿಕಿತ್ಸೆ ನೀಡಲಾಗಿದೆ
- 42,865 ಕ್ಯಾಥ್ ಲ್ಯಾಬ್ ಕಾರ್ಯವಿಧಾನ (ದೇಶದಲ್ಲಿ ಅತಿ ಹೆಚ್ಚು)
- 24,447 ಆಂಜಿಯೋಗ್ರಾಮ್‍ಗಳು
- 1500 ಮಿಟ್ರಲ್ ವಾಲ್ವುಲೋಪ್ಲ್ಯಾಸ್ಟಿಗಳು (ಜಗತ್ತಿನಲ್ಲಿ ಅತಿ ಹೆಚ್ಚು)
- 15,000 ಆಂಜಿಯೋಪ್ಲ್ಯಾಸ್ಟಿಗಳು (ದೇಶದಲ್ಲಿ ಅತಿ ಹೆಚ್ಚು ಪ್ರಮಾಣ)
- 3,000 ಬೈಪಾಸ್ ಮತ್ತು ವಾಲ್ವ್ ರಿಪ್ಲೇಸ್‍ಮೆಂಟ್ ಸರ್ಜರಿಗಳು
- 3,00,054 ಎಕೋ - ಕಾರ್ಡಿಯೋಗ್ರಾಮ್‍ಗಳು (ಜಗತ್ತಿನಲ್ಲಿ ಅತಿ ಹೆಚ್ಚು)
9. ಬಡ ರೋಗಿಗಳ ಕಾರ್ಪಸ್ ನಿಧಿಯ ರಚನೆ ವಿವಿಧೆಡೆಯಿಂದ 100 ಕೋಟಿ ರೂ. ಸಂಗ್ರಹ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ
ಬೆಳಗಾವಿ ಅಧಿವೇಶನ: 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು