Koppal: ರಾಜ್ಯಪಾಲರ ಆಗಮನದ ವೇಳೆ ಅಂಜನಾದ್ರಿಯಲ್ಲಿ ಪೂಜೆಗೆ ಪಟ್ಟು ಹಿಡಿದ ಅರ್ಚಕ ವಿದ್ಯಾದಾಸ ಬಾಬಾ

Published : Dec 09, 2022, 10:55 AM IST
Koppal: ರಾಜ್ಯಪಾಲರ ಆಗಮನದ ವೇಳೆ ಅಂಜನಾದ್ರಿಯಲ್ಲಿ ಪೂಜೆಗೆ ಪಟ್ಟು ಹಿಡಿದ ಅರ್ಚಕ ವಿದ್ಯಾದಾಸ ಬಾಬಾ

ಸಾರಾಂಶ

ಅಂಜನಾದ್ರಿಯಲ್ಲಿ ಆಂಜನೇಯ ಪೂಜೆಗಾಗಿ ಇಂದು ಹೈಡ್ರಾಮಾ ನಡೆಯಿತು. ರಾಜ್ಯಪಾಲರು ಇಂದು ಅಂಜನಾದ್ರಿಗೆ ಬರಯವಾಗ ನನಗೆ ಪೂಜೆಗೆ ಅವಕಾಶ ನೀಡಿ ಎಂದು ಅರ್ಚಕ ವಿದ್ಯಾದಾಸ ಬಾಬಾ ಪಟ್ಟು ಹಿಡಿದಿದ್ದರು. 

ಕೊಪ್ಪಳ (ಡಿ.09): ಅಂಜನಾದ್ರಿಯಲ್ಲಿ ಆಂಜನೇಯ ಪೂಜೆಗಾಗಿ ಇಂದು ಹೈಡ್ರಾಮಾ ನಡೆಯಿತು. ರಾಜ್ಯಪಾಲರು ಇಂದು ಅಂಜನಾದ್ರಿಗೆ ಬರಯವಾಗ ನನಗೆ ಪೂಜೆಗೆ ಅವಕಾಶ ನೀಡಿ ಎಂದು ಅರ್ಚಕ ವಿದ್ಯಾದಾಸ ಬಾಬಾ ಪಟ್ಟು ಹಿಡಿದಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಡಳಿತ ಅಧಿಕಾರಿಗಳು ಒತ್ತಾಯಪೂರ್ವಕವಾಗಿ ಮೇಲೆ ಕಳುಹಿಸಿದರು. ವಿಶ್ವವಿಖ್ಯಾತವಾಗಿರುವ ಅಂಜನಾದ್ರಿಯಲ್ಲಿ ಈಗ ಪೂಜಾ ವಿವಾದ ಉಂಟಾಗಿದೆ. 

ಇಲ್ಲಿ ಪೂಜೆ ಸಲ್ಲಿಸುತ್ತಿದ್ದ ವಿದ್ಯಾದಾಸ ಬಾಬಾ ಎಂಬುವವರು ಕಳೆದ ಮೂರು ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯದ ಹಿನ್ನೆಲೆಯಲ್ಲಿ ಹನುಮನ ಪೂಜೆಯಿಂದ ಬಿಡಿಸಿದ್ದರು. ಈ ಕುರಿತು ವಿದ್ಯಾದಾಸ ಬಾಬಾ ಹೈಕೋರ್ಟ್‌ಗೆ ಮೋರೆ ಹೋಗಿದ್ದು. ಈ ಕುರಿತು ಹೈಕೋರ್ಟ್ ಇಡೀ ದಿನ ಪೂಜೆ ಹಾಗು ಇಲ್ಲಿ ವಾಸವಾಗಿರಲು ಅವಕಾಶ ನೀಡಿದೆ. ಈ ಮಧ್ಯೆ ಇಂದು ಅಂಜನಾದ್ರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬರುವ ಹಿನ್ನೆಲೆಯಲ್ಲಿ ಅವರಿಗೆ ಬೆಟ್ಟದ ಕೆಳಭಾಗದಲ್ಲಿಯೇ ಪೂಜೆ ಸಿದ್ದತೆ ಮಾಡಿಕೊಂಡಿದ್ದರು.  ಈ ಮಧ್ಯೆ ಸ್ಥಳಕ್ಕೆ ಆಗಮಿಸಿದ ವಿದ್ಯಾದಾಸ ಬಾಬ ತಮಗೆ ಇಲ್ಲಿಯೂ ಪೂಜೆಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದರು. 

ವಿಜಯಪುರದಲ್ಲೂ ಶುರುವಾಯ್ತು ಧರ್ಮ ಸಂಘರ್ಷ: ಧರ್ಮ ದಂಗಲ್‌ಗೆ ಸಾಕ್ಷಿಯಾಗುತ್ತಾ ಸಂಕ್ರಾಂತಿ ಜಾತ್ರೆ

ಇಲ್ಲಿ ರಾಜ್ಯಪಾಲರಿಗೆ ಭದ್ರತೆ ಇದೆ. ಇಲ್ಲಿ ಮುಜರಾಯಿ ಇಲಾಖೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ. ನಿಮಗೆ ಬೆಟ್ಟದ ಮೇಲೆ ಪೂಜೆಗೆ ಅವಕಾಶ ನೀಡಲಾಗಿದೆ. ಈ ಕಾರಣಕ್ಕೆ ಇಲ್ಲಿ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದರು. ಆದರೆ ಇಲ್ಲಿ ನನಗೆ ಪೂಜೆಗೆ ಅವಕಾಶ ನೀಡಬೇಕು ಇಲ್ಲಿದಿದ್ದರೆ ನ್ಯಾಯಾಲಯ ಆದೇಶ ಉಲ್ಲಂಘಿಸಿದಂತಾಗುತ್ತದೆ.  ಇಲ್ಲಿಯೇ ಪೂಜೆ ಅವಕಾಶ ನೀಡಿ ಎಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ವಿದ್ಯಾದಾಸ ಬಾಬಾ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು. ಸ್ಥಳದಲ್ಲಿಯೇ ಧರಣಿ ಕುಳಿತುಕೊಳ್ಳಲು ಮುಂದಾದರು. 

ಟನ್‌ಗೆ 50 ಹೆಚ್ಚಳ ಆದೇಶ ಸುಟ್ಟು ಕಬ್ಬು ರೈತರ ಭಾರೀ ಪ್ರತಿಭಟನೆ

ಈ ಸಂದರ್ಭದಲ್ಲಿ ಪೊಲೀಸರು ವಿದ್ಯಾದಾಸ ಬಾಬಾರನ್ನು ವಶಕ್ಕೆ ಪಡೆದು ನಂತರ ಅವರನ್ನು ಬೆಟ್ಟದ ಮೇಲೆ ಕಳುಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾದಾಸ ಬಾಬಾ ಇದು ನ್ಯಾಯಾಲಯದ ಆದೇಶ ಉಲ್ಲಂಘನೆಯಾಗುತ್ತಿದೆ ನನಗೆ ಪೂಜೆಗೆ ಅವಕಾಶ ನೀಡಬೇಕೆಂದು ಹೇಳಿದರು. ಆದರೆ ವಿದ್ಯಾರ್ಥಿ ಬಾಬಾರಿಗೆ ಮೇಲೆ ಮಾತ್ರ ಪೂಜೆಗೆ ಅವಕಾಶ ನೀಡಲಾಗಿದೆ. ಈ ಕಾರಣಕ್ಕಾಗಿ ಇಲ್ಲಿ ನ್ಯಾಯಾಂಗ ಆದೇಶ ಉಲ್ಲಂಘನೆಯಾಗುವುದಿಲ್ಲ ಎಂದು ಗಂಗಾವತಿ ತಹಸೀಲ್ದಾರ ನಾಗರಾಜ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್