
ರಾಯಚೂರು: ಇಲ್ಲಿನ ಕೃಷಿ ವಿವಿ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ್ ಇಟಗಿ ಅವರ ಪುತ್ರ ಸಮನ್ ಮತ್ತು ಶಾಸಕ ಶರಣಬಸಪ್ಪ ದರ್ಶನಾಪುರ ಅವರ ಪುತ್ರಿ ಸೌಜನ್ಯರ ಮದುವೆ ಸಮಾರಂಭ ಹಮ್ಮಿಕೊಂಡಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.
ಇದೇ ಫೆ.1 ರಂದು ವಿವಿ ಆವರಣ ದಲ್ಲಿ ಈ ಶಾಸಕದ್ವಯರ ಮಕ್ಕಳ ವಿವಾ ಹದ ಸಿದ್ಧತೆಗಳು ಸಾಗಿದ್ದು, ಇದಕ್ಕಾಗಿ ಬೃಹತ್ ಪೆಂಡಾಲ್, ವಾಹನಗಳಿಗೆ ಪಾರ್ಕಿಂಗ್ ಹಾಗೂ ಊಟದ ವ್ಯವಸ್ಥೆ ಮಾಡಲಾಗುತ್ತಿದೆ.
ಇದರಿಂದ ಶೈಕ್ಷ ಣಿಕ ವಾತಾವರಣಕ್ಕೆ ಅಡ್ಡಿಯಾಗುತ್ತದೆ. ಸರ್ಕಾರಿ ಜಾಗದಲ್ಲಿ ಮದುವೆ, ಖಾಸಗಿ ಸಮಾರಂಭವನ್ನು ಆಯೋಜಿ ಸುವ ಪದ್ಧತಿ ಸರಿಯಲ್ಲ ಎಂದು ಸಾರ್ವಜನಿಕರು ಟೀಕಿಸಿದ್ದಾರೆ. ಹಿಂದೆ ಕೃಷಿ ಕಾಲೇಜು ಇದ್ದಾಗ ಮಾಜಿ ಸಚಿವ ಎಂ.ಎಸ್. ಪಾಟೀಲ್ ಅವರ ಮಗನ ಮದುವೆ ಇದೇ ಸ್ಥಳ ದಲ್ಲಿ ನೆರವೇರಿತ್ತು. ಆ ಸಂದರ್ಭದಲ್ಲಿ ಯೂ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಹೀಗಾಗಿ ನಂತರ ಕೃಷಿ ವಿವಿ ಆಡಳಿತ ಮಂಡಳಿಯ ಸದಸ್ಯರು ಸೇರಿಕೊಂಡು ಕೃಷಿ ವಿವಿಯಲ್ಲಿ ಕೆಲಸ ಮಾಡಿದವರಿಗೆ ರಿಯಾಯಿತಿ ದರದಲ್ಲಿ ಮತ್ತು ಅನ್ಯರಿಗೆ ಬೇರೆ ದರವನ್ನು ನಿಗದಿಪಡಿಸಿ ಸಮಾರಂಭ ಮಾಡಲು ನಿರ್ಧರಿಸಿತು.
ಅದರಂತೆ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ ಅವರು ಎರಡ್ಮೂರು ವರ್ಷ ಕೃಷಿ ವಿವಿಯಲ್ಲಿ ಕೆಲಸ ಮಾಡಿದ್ದರಿಂದ ರಿಯಾಯಿತಿ ದರದಲ್ಲಿ ನೀಡಲಾಗಿದೆ ಎಂದು ವಿವಿ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ