'ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಬೇಕು ವಿವಾದಾತ್ಮಕ ಹೇಳಿಕೆ: ಕೆಎಸ್ ಈಶ್ವರಪ್ಪ ವಿರುದ್ಧ ಎಫ್‌ಐಆರ್!

Published : Feb 09, 2024, 08:45 PM IST
'ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಬೇಕು ವಿವಾದಾತ್ಮಕ ಹೇಳಿಕೆ: ಕೆಎಸ್ ಈಶ್ವರಪ್ಪ ವಿರುದ್ಧ ಎಫ್‌ಐಆರ್!

ಸಾರಾಂಶ

ದೇಶ ಇಬ್ಭಾಗ ಮಾಡುವ ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ದಾವಣಗೆರೆ (ಫೆ.9): ದೇಶ ಇಬ್ಭಾಗ ಮಾಡುವ ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಾಣ ಬೆದರಿಕೆ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ  ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯ ನಿವಾಸಿ ಹನುಮಂತ ಎಂಬುವವರಿಂದ  ಐಪಿಸಿ 505(1)(ಸಿ), 505(2), ಮತ್ತು 506 ಅಡಿ ದೂರು ದಾಖಲಿಸಿದ್ದಾರೆ.

ಡಿಕೆ ಸುರೇಶ್, ವಿನಯ್ ಕುಲಕರ್ಣಿ ಇಬ್ಬರೂ ದೇಶದ್ರೋಹಿಗಳು; ಖರ್ಗೆಗೆ ತಾಕತ್ತಿದ್ದರೆ ಪಕ್ಷದಿಂದ ಕಿತ್ತುಹಾಕಲಿ: ಈಶ್ವರಪ್ಪ ಸವಾಲು!

ನಿನ್ನೆ ದಾವಣಗೆರೆಯಲ್ಲಿ ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಸ್ ಈಶ್ವರಪ್ಪ, ಡಿಕೆ ಸುರೇಶ್, ವಿನಯ್ ಕುಲಕರ್ಣಿ ದೇಶದ್ರೋಹಿಗಳಾಗಿದ್ದು, ಎಐಸಿಸಿ ಮಲ್ಲಿಕಾರ್ಜುನ ಖರ್ಗೆಗೆ ತಾಕತ್ತು ಇದ್ರೆ ಪಕ್ಷದಿಂದ ಕಿತ್ತುಹಾಕಲಿ ಎಂದು ಸವಾಲು ಹಾಕಿದ್ದರು. ಈ ವೇಳೆ ದೇಶ ಒಡೆಯುವ ಇಂಥ ದೇಶದ್ರೋಹಿಗಳನ್ನು ಗುಂಡಿಟ್ಟುಕೊಲ್ಲಬೇಕು ಎಂಬಂಥ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

 

ಕಾಂಗ್ರೆಸ್ ಹಿಂದಿನಿಂದಲೂ ದೇಶ ಒಡೆಯುವ ಕೆಲಸ ಮಾಡುತ್ತಿದೆ: ಈಶ್ವರಪ್ಪ ವಾಗ್ದಾಳಿ

 

ಕೆಎಸ್‌ ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದರು. ಸಿಎಂ ಸಿದ್ದರಾಮಯ್ಯ ಸಹ ಕೆಎಸ್ ಈಶ್ವರಪ್ಪಗೆ ಹೊಡಿ ಬಡಿ ಕಡಿ ಈ ಭಾಷೆ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಇಂದು ಹೇಳಿಕೆ ನೀಡಿದ್ದರು. ಸಿಎಂ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಈಶ್ವರಪ್ಪ  ವಿರುದ್ಧ ದೂರು ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ