
ಚಿತ್ರದುರ್ಗ, (ಅ.10): ಬೇರೊಂದು ಧರ್ಮಕ್ಕೆ ಮತಾಂತರಗೊಂಡಿದ್ದ (convert) ನಾಲ್ಕು ಕುಟುಂಬಗಳನ್ನು ಮತ್ತೆ ಹಿಂದೂ (Hindu) ಧರ್ಮಕ್ಕೆ ಕರೆತರಲಾಗಿದೆ.
ನನ್ನ ತಾಯಿಯನ್ನೂ ಮತಾಂತರ ಮಾಡಿದ್ದಾರೆ ಎಂದು ಸದನದಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದ ಬಿಜೆಪಿ (BJP) ಶಾಸಕ ಗೂಳಿಹಟ್ಟಿ ಶೇಖರ್ (Gulihatti shekar), ಕ್ರೈಸ್ತ ಮತಾಂತರವಾಗಿದ್ದವರನ್ನು ತಮ್ಮ ನೇತೃತ್ವದಲ್ಲಿ ಮರಳಿ ಹಿಂದು ಧರ್ಮಕ್ಕೆ (religion) ಕರೆಸಿಕೊಂಡಿದ್ದಾರೆ.
ವಿಧಾನಸಭೆಯಲ್ಲಿ 'ಕವರ್ ಸ್ಟೋರಿ' ಸದ್ದು, ಮತಾಂತರದ ಬಗ್ಗೆ ಧ್ವನಿ ಎತ್ತಿದ ಗೂಳಿಹಟ್ಟಿ!
ಹೊಸದುರ್ಗ (Hosadurga) ತಾಲೂಕಿನ ಬಲ್ಲಾಳ ಸಮುದ್ರ ಗ್ರಾಮದ ಸುಡುಗಾಡು ಸಿದ್ದ ಸಮುದಾಯದವರು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದರು. ಅವರೆಲ್ಲರನ್ನೂ ಇಂದು (ಅ.10) ಹಾಲುರಾಮೇಶ್ವರ ದೇವಾಲಯದಲ್ಲಿ ಘರ್ ವಾಪಸಿ ಮಾಡಲಾಗಿದೆ
ಹೊಸದುರ್ಗ ತಾಲೂಕಿನ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ನೇತತ್ವದಲ್ಲಿ ಪ್ರದೀಪ್ ಕುಟುಂಬ ಸೇರಿದಂತೆ ಒಟ್ಟು 4 ಕುಟುಂಬಗಳನ್ನು ಹಿಂದೂ ಧರ್ಮಕ್ಕೆ ವಾಪಸ್ ಕರೆತರಲಾಗಿದೆ.
ಹಾಲುರಾಮೇಶ್ವರ ದೇವಸ್ಥಾನದಲ್ಲಿ ಮೈಮೇಲೆ ನೀರು ಚಿಮುಕಿಸಿಕೊಂಡು ಶಿಲುಬೆ ತೆಗೆದಿಟ್ಟ ಬಳಿಕ ಕಂಕಣ ಕಟ್ಟಿಸಿ ಜತೆಗೆ ಮಂಜುನಾಥಸ್ವಾಮಿ ಫೋಟೋ ನೀಡಿ ಮಾತೃಧರ್ಮಕ್ಕೆ ಸ್ವಾಗತಿಸಿಕೊಳ್ಳಲಾಯಿತು.
ಇತ್ತೀಚೆಗೆ ತಾನೆ ಗೂಳಿಹಟ್ಟಿ ಶೇಖರ್ ಅವರ ತಾಯಿಯನ್ನೇ ಮತಾಂತರ ಮಾಡಲಾಗಿತ್ತು. ಈ ಬಗ್ಗೆ ಗೂಳಿಹಟ್ಟಿ ಶೇಖರ್ ಧ್ವನಿ ಎತ್ತಿದ್ದು, ನಮ್ಮ ತಾಯಿ ಮಾತ್ರವಲ್ಲ ನೂರಾರು ಅಮಾಯಕರನ್ನೂ ಮತಾಂತರ ಪಿಡುಗಿಗೆ ಸಿಲುಕಿಸಲಾಗಿದೆ ಎಂದು ಅವರು ಆರೋಪಿಸಿದ್ದರು. ಇದು ಭಾರೀ ಗಂಭೀರ ಸ್ವರೂಪ ಪಡೆದುಕೊಂಡಿತ್ತು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ