
ಬೆಂಗಳೂರು (ಸೆ.21): ರಾಜ್ಯದಲ್ಲಿ ಭಾನುವಾರ ಹೊಸದಾಗಿ 8,445 ಮಂದಿಯಲ್ಲಿ ಕೊರೋನಾ ಕಾಣಿಸಿಕೊಂಡಿದ್ದು, 8,611 ಮಂದಿ ಗುಣಮುಖರಾಗಿದ್ದಾರೆ. ಇದೇ ದಿನ 101 ಮಂದಿ ಮೃತಪಟ್ಟಿದ್ದು ಈವರೆಗೆ ಸಾವಿಗೀಡಾದವರ ಸಂಖ್ಯೆ ಸಂಖ್ಯೆ 8 ಸಾವಿರದ ಸಂಖ್ಯೆ ದಾಟಿ 8023ಕ್ಕೆ ಏರಿದೆ.
ಸೆಪ್ಟೆಂಬರ್ 11ರಂದು ಸಾವಿನ ಸಂಖ್ಯೆ 7 ಸಾವಿರ ದಾಟಿತ್ತು. ಆ ನಂತರದ 10 ದಿನದಲ್ಲಿ 1000 ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ನಡುವೆ, 8,611 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗುವುದರೊಂದಿಗೆ ಈವರೆಗೆ 4.13 ಲಕ್ಷ ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿನ ಗುಣಮುಖರ ಸಂಖ್ಯೆ ರಾಷ್ಟ್ರೀಯ ಸರಾಸರಿ ಶೇ.79.68ಕ್ಕಿಂತ ಕಡಿಮೆಯಿದೆ.
8,191 ಮಂದಿಗೆ ಕೊರೋನಾ ಸೋಂಕು ತಗುಲುವುದರೊಂದಿಗೆ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 5.19 ಲಕ್ಷ ತಲುಪಿದೆ. ಇದರಲ್ಲಿ 98,043 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 811 ಮಂದಿ ರಾಜ್ಯದ ವಿವಿಧ ಕೋವಿಡ್ ಅಸ್ಪತ್ರೆಗಳಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ರಾಜ್ಯದಲ್ಲಿ 60,477 ಕೊರೋನಾ ಪರೀಕ್ಷೆಗಳು ನಡೆದಿದ್ದು ಈವರೆಗೆ ಒಟ್ಟು 42.4 ಲಕ್ಷ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದೆ.
ಕೊರೋನಾದಿಂದ ಗುಣಮುಖ ಆದವರ ಅಧ್ಯಯನಕ್ಕೆ ಸಮಿತಿ ರಚನೆ: ಸುಧಾಕರ್ .
ಬೆಂಗಳೂರಲ್ಲೇ ಅಧಿಕ: ಬೆಂಗಳೂರು ನಗರದಲ್ಲಿ 32, ಮೈಸೂರಿನಲ್ಲಿ ಒಂದು ವರ್ಷದ ಹೆಣ್ಣು ಮಗು ಸೇರಿದಂತೆ 12, ಬಳ್ಳಾರಿ 8, ಬೆಳಗಾವಿ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ ತಲಾ 6, ಕೊಪ್ಪಳ, ಗದಗ ತಲಾ 4, ಉತ್ತರ ಕನ್ನಡ, ಹಾವೇರಿ, ತಲಾ 2, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಮಂಡ್ಯ, ರಾಯಚೂರು, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರು ಕೊರೋನಾದಿಂದ ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ 3322, ಮೈಸೂರು 481, ದಕ್ಷಿಣ ಕನ್ನಡ 380, ಕೊಪ್ಪಳ 337, ಧಾರವಾಡ 305, ಬಳ್ಳಾರಿ 298 ಉಡುಪಿ ಮತ್ತು ಶಿವಮೊಗ್ಗ 295, ಹಾಸನ 277, ಚಿತ್ರದುರ್ಗ 254, ತುಮಕೂರು 244, ಬೆಂಗಳೂರು ಗ್ರಾಮಾಂತರ 179, ಮಂಡ್ಯ 165, ಬೆಳಗಾವಿ 151, ಕಲಬುರಗಿ 136, ದಾವಣಗೆರೆ 130, ಚಿಕ್ಕಮಗಳೂರು 129, ಯಾದಗಿರಿ 116, ಉತ್ತರ ಕನ್ನಡ 108, ಕೋಲಾರ 105, ಬಾಗಲಕೋಟೆ 90, ಚಿಕ್ಕಬಳ್ಳಾಪುರ ಮತ್ತು ವಿಜಯಪುರ 81, ಬೀದರ್ 77, ಗದಗ 75, ಚಾಮರಾಜನಗರ 69, ರಾಮನಗರ 57, ಹಾವೇರಿ 44 ಹಾಗೂ ಕೊಡಗು ಜಿಲ್ಲೆಯಲ್ಲಿ 32 ಹೊಸ ಕೋವಿಡ್ ಪ್ರಕರಣಗಳು ದೃಢ ಪಟ್ಟಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ