ತಗ್ಗಿದ ಕೊರೋನಾ ಮಹಾಮಾರಿ : ರಾಜ್ಯದಲ್ಲಿ ಕೇವಲ 13 ಸಾವು

Kannadaprabha News   | Asianet News
Published : Nov 23, 2020, 07:33 AM IST
ತಗ್ಗಿದ ಕೊರೋನಾ ಮಹಾಮಾರಿ : ರಾಜ್ಯದಲ್ಲಿ ಕೇವಲ 13 ಸಾವು

ಸಾರಾಂಶ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳು  ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕೊರೋನಾದಿಂದ ಸಾವಿನ ಸಂಖ್ಯೆಯೂ 26 ಜಿಲ್ಲೆಗಳಲ್ಲಿ ಶೂನ್ಯವಾಗಿದೆ

ಬೆಂಗಳೂರು (ನ.23):  ರಾಜ್ಯದಲ್ಲಿ ಭಾನುವಾರ ಮತ್ತೆ ದಾಖಲೆ ಸಂಖ್ಯೆಯ 1.26ಲಕ್ಷಕ್ಕೂ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದ್ದು 1,704 ಮಂದಿಗೆ ಸೋಂಕು ದೃಢಪಟ್ಟಿದೆ. 13 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. 1537 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಸೋಂಕಿಗೆ ತುತ್ತಾದ 8,73,046 ಮಂದಿ ಪೈಕಿ 8,36,505 ಮಂದಿ ಗುಣಮುಖರಾಗಿದ್ದಾರೆ. 11,654 ಜನ (19 ಅನ್ಯಕಾರಣದ ಪ್ರಕರಣ ಹೊರತುಪಡಿಸಿ) ಇದುವರೆಗೂ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ 24,868 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಹಾಗೂ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಆರೋಗ್ಯ ಗಂಭೀರವಾಗಿರುವ 470 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

'ಭಾರತದಲ್ಲಿ ಕೊರೋನಾ ಲಸಿಕೆ ತೆಗೆದುಕೊಳ್ಳಲು ಜನ ಸಿದ್ಧರಿರುವುದೇ ಖುಷಿ ವಿಚಾರ' ...

ರಾಜ್ಯದಲ್ಲಿ ಭಾನುವಾರ 20,399 ರಾರ‍ಯಪಿಡ್‌ ಆಂ್ಯಟಿಜನ್‌ ಪರೀಕ್ಷೆ, 1,06,505 ಆರ್‌ಟಿಪಿಸಿಆರ್‌ ಪರೀಕ್ಷೆ ಸೇರಿ ಒಟ್ಟು 1,26,904 ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಶನಿವಾರ 1.25 ಲಕ್ಷ ಪರೀಕ್ಷೆ ನಡೆಸಿದ್ದೇ ಇದುವರೆಗಿನ ದಾಖಲೆಯಾಗಿತ್ತು.

ಬೆಂಗಳೂರಲ್ಲಿ 1039 ಪ್ರಕರಣ:

ಭಾನುವಾರ ಬೆಂಗಳೂರಿನಲ್ಲಿ 1039 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿರುವ ವರದಿಯಾಗಿದೆ. ಉಳಿದಂತೆ ಮೈಸೂರು 100, ದಕ್ಷಿಣ ಕನ್ನಡ 46, ಹಾಸನ 44, ಬೆಂಗಳೂರು ಗ್ರಾಮಾಂತರ 42, ಮಂಡ್ಯ, ಬೆಳಗಾವಿ, ರಾಯಚೂರು ತಲಾ 32, ವಿಜಯಪುರ 27, ಹಾವೇರಿ 25,ದಾವಣಗೆರೆ 24, ಉಡುಪಿ, ಉತ್ತರ ಕನ್ನಡ ತಲಾ 23, ಬಳ್ಳಾರಿ 22, ಶಿವಮೊಗ್ಗ, ಕೊಪ್ಪಳ ತಲಾ 21, ಚಿತ್ರದುರ್ಗ 18, ಚಾಮರಾಜನಗರ 16, ತುಮಕೂರು, ಕೋಲಾರ ತಲಾ 14, ಕಲಬುರಗಿ, ಧಾರವಾಡ ತಲಾ 12, ಚಿಕ್ಕಮಗಳೂರು 11, ಕೊಡಗು, ಗದಗ ತಲಾ 10, ರಾಮನಗರ, ಯಾದಗಿರಿ ತಲಾ 9, ಚಿಕ್ಕಬಳ್ಳಾಪುರ 7, ಬೀದರ್‌ 6, ಬಾಗಲಕೋಟೆ 4 ಪ್ರಕರಣಗಳು ದೃಢಪಟ್ಟಿವೆ.

ಭಾನುವಾರದ ಸಾವಿನ ಪ್ರಕಣಗಳಲ್ಲಿ ಬೆಂಗಳೂರಿನಲ್ಲಿ 10 ಮಂದಿ, ಬಳ್ಳಾರಿ, ಧಾರವಾಡ ಮತ್ತು ಮೈಸೂರಿನಲ್ಲಿ ತಲಾ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಇಲಾಖೆ ವರದಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ