ಚುನಾವಣೆ ಮುಗಿಯುತ್ತಿದ್ದಂತೆ ಏರಿದ ಕೊರೋನಾ : ಎಚ್ಚರ

Kannadaprabha News   | Asianet News
Published : Nov 05, 2020, 07:26 AM IST
ಚುನಾವಣೆ ಮುಗಿಯುತ್ತಿದ್ದಂತೆ  ಏರಿದ ಕೊರೋನಾ : ಎಚ್ಚರ

ಸಾರಾಂಶ

ರಾಜ್ಯದಲ್ಲಿ ಚುನಾವಣೆ ಮುಕ್ತಾಯವಾಗುತ್ತಿದ್ದ ಕೊರೋನಾ ಪ್ರಕರಣಗಳು ಕೂಡ ಹೆಚ್ಚಾಗಿವೆ. ಆದರೆ ಗುಣಮುಖರ ಸಂಖ್ಯೆಯೂ ಏರಿದೆ. 

 ಬೆಂಗಳೂರು (ನ.05):  ರಾಜ್ಯದಲ್ಲಿ ಇಳಿಮುಖವಾಗುತ್ತಿದ್ದ ಕೊರೋನಾ ಸೋಂಕಿನ ಪ್ರಕರಣಗಳು ಬುಧವಾರ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ ಗುಣಮುಖರ ಸಂಖ್ಯೆ ಮಾತ್ರ ಹೆಚ್ಚಳ ಆಗುತ್ತಿದೆ.

ಬುಧವಾರ 3,377 ಹೊಸ ಪ್ರಕರಣಗಳು ಪತ್ತೆಯಾಗಿದೆ. 8,045 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 34 ಮಂದಿ ತಮ್ಮ ಮೃತಪಟ್ಟಿದ್ದಾರೆ. 928 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 35,693 ಕ್ಕೆ ಇಳಿದಿದೆ. ರಾಜ್ಯದಲ್ಲಿ ಈವರೆಗೆ 8.35 ಲಕ್ಷ ಜನರಲ್ಲಿ ಸೋಂಕು ತಗುಲಿದ್ದು, ಈ ಪೈಕಿ 7.88 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಬುಧವಾರ 1.02 ಲಕ್ಷ ಜನರಿಗೆ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಒಟ್ಟು 82.88 ಲಕ್ಷ ಪರೀಕ್ಷೆ ಮಾಡಲಾಗಿದೆ.

ಮಹಾಮಾರಿಗೆ ಸಿಕ್ತು ಬ್ರಹ್ಮಾಸ್ತ್ರ : ಈ ಲಸಿಕೆಯಿಂದ ತಡೆಯಬಹುದು ಕೊರೋನಾ ...

ಬೆಂಗಳೂರು ನಗರದಲ್ಲಿ 16 ಮಂದಿ ಅಸುನೀಗಿದ್ದಾರೆ. ಬಳ್ಳಾರಿ ಮತ್ತು ಮೈಸೂರಿನಲ್ಲಿ ತಲಾ 3, ದಾವಣಗೆರೆ, ಧಾರವಾಡ ಮತ್ತು ರಾಮನಗರದಲ್ಲಿ ತಲಾ 2, ಉಡುಪಿ, ಕೋಲಾರ, ಕಲಬುರಗಿ, ಹಾಸನ, ಹಾವೇರಿ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ ಒಬ್ಬರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ 18 ಜಿಲ್ಲೆಗಳಲ್ಲಿ ಒಂದೂ ಕೊರೋನಾ ಸಾವು ಸಂಭವಿಸಿಲ್ಲ.

ಬೆಂಗಳೂರು ನಗರ ಜಿಲ್ಲೆಯಲ್ಲಿ 1,953 ಮಂದಿಯಲ್ಲಿ ಸೋಂಕು ದೃಢವಾಗಿದೆ. ಉಳಿದಂತೆ ಬಾಗಲಕೋಟೆ 47, ಬಳ್ಳಾರಿ 66, ಬೆಳಗಾವಿ 46, ಬೆಂಗಳೂರು ಗ್ರಾಮಾಂತರ 92, ಬೀದರ್‌ 2, ಚಾಮರಾಜ ನಗರ 17, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 29, ಚಿತ್ರದುರ್ಗ 52, ದಕ್ಷಿಣ ಕನ್ನಡ 70, ದಾವಣಗೆರೆ 9, ಧಾರವಾಡ 39, ಗದಗ 2, ಹಾಸನ 172, ಹಾವೇರಿ 20, ಕಲಬುರಗಿ 45 ಕೊಡಗು 10, ಕೋಲಾರ 75, ಕೊಪ್ಪಳ 25, ಮಂಡ್ಯ 93, ಮೈಸೂರು 168, ರಾಯಚೂರು 20, ರಾಮನಗರ 22, ಶಿವಮೊಗ್ಗ 32, ತುಮಕೂರು 95 ಉಡುಪಿ 50, ಉತ್ತರ ಕನ್ನಡ 58, ವಿಜಯಪುರ 43 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 18 ಹೊಸ ಪ್ರಕರಣಗಳು ಬೆಳಕಿಗೆ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!