ಕರ್ನಾಟಕದಲ್ಲಿ ತಗ್ಗಿದ ಕೊರೋನಾ: ಅಂಕಿ-ಸಂಖ್ಯೆ ಕೊಟ್ಟ ಸಚಿವ ಸುಧಾಕರ್

Published : Sep 27, 2021, 06:36 PM IST
ಕರ್ನಾಟಕದಲ್ಲಿ ತಗ್ಗಿದ ಕೊರೋನಾ: ಅಂಕಿ-ಸಂಖ್ಯೆ ಕೊಟ್ಟ ಸಚಿವ ಸುಧಾಕರ್

ಸಾರಾಂಶ

* ಕರ್ನಾಟಕದಲ್ಲಿ ತಗ್ಗಿದ ಕೊರೋನಾ ಎರಡನೇ ಅಲೆ * ಹೊಸದಾಗಿ 504 ಜನರಿಗೆ ಕೊರೋನಾ, 20 ಸಾವು * ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ ಸಚಿವ ಡಾ ಕೆ ಸುಧಾಕರ್

ಬೆಂಗಳೂರು, (ಸೆ.27): ರಾಜ್ಯದಲ್ಲಿ ಇಂದು (ಸೆ.27) 1,03,800 ಕೋವಿಡ್ (Covid) ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ  ಹೊಸದಾಗಿ 504 ಜನರಿಗೆ ಕೊರೋನಾ ಸೋಂಕು  ತಗುಲಿರುವುದು ದೃಢಪಟ್ಟಿದೆ.

ಇನ್ನು 20 ಜನ ಬಲಿಯಾಗಿದ್ದು, 893 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಡಾ ಕೆ ಸುಧಾಕರ್ (Dr K Sudhakar) ಟ್ವಿಟ್ಟರ್ ಮೂಲಕ  ಮಾಹಿತಿ ನೀಡಿದ್ದಾರೆ.

ಲಸಿಕೆ ಇನ್ನೂ ಪಡೆದಿಲ್ವಾ? ಸಿಬ್ಬಂದಿ ಮನೆಗೇ ಬರ್ತಾರೆ..!

ರಾಜಧಾನಿ ಬೆಂಗಳೂರಿನಲ್ಲಿ 181 ಜನರಿಗೆ ಸೋಂಕು ತಗುಲಿದೆ. 265 ಜನ ಗುಣಮುಖರಾಗಿದ್ದಾರೆ. 5 ಜನ ಸೋಂಕಿತರು ಮೃತಪಟ್ಟಿದ್ದು, 7394 ಸಕ್ರಿಯ ಪ್ರಕರಣಗಳಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನೈಟ್‌ ಕರ್ಫ್ಯೂ (ರಾತ್ರಿ10ರಿಂದ ಬೆಳಗ್ಗೆ 05ರ ವರೆಗೆ) ಅಕ್ಟೋಬರ್ 11ರ ವರೆಗೆ ವಿಸ್ತರಿಸಲಾಗಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 0.48 ರಷ್ಟು ಇದ್ದು, 12,804 ಸಕ್ರಿಯ ಪ್ರಕರಣಗಳು ಇವೆ. ಒಟ್ಟಿನಲ್ಲಿ ಕೊರೋನಾ ಎರಡನೇ ಅಲೆ ಸೋಂಕಿನ ತೀವ್ರತೆಯಲ್ಲಿ ಭಾರೀ ಕಡಿಮೆಯಾಗಿದೆ. ಆದರೂ ಜನ ಯಾವುದೇ ಕಾರಣಕ್ಕೂ ಮೈಮರೆಯಬಾರದು.
 
ತಜ್ಞ ವೈದ್ಯರು ಮೂರನೇ ಅಲೆ ಎಚ್ಚರಿಕೆ ಕೊಟ್ಟಿದ್ದರಿಂದ ಜನರು ತಪ್ಪದೇ ಮಾಸ್ಕ್ ಹಾಗೂ ಸಮಾಜಿಕ ಅಂತರ ಕಾಮಾಡಿಕೊಳ್ಳಬೇಕು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ