
ಬೆಂಗಳೂರು(ಜೂ.03): ರಾಜ್ಯದಲ್ಲಿ ಹೊಸ ಕೋವಿಡ್ ಸೋಂಕು ಪ್ರಕರಣಗಳು ತುಸು ಹೆಚ್ಚಾಗಿದ್ದು, ಬುಧವಾರ 16,387 ಮಂದಿಗೆ ಸೋಂಕು ದೃಢಪಟ್ಟ ವರದಿಯಾಗಿದೆ. ಒಂದೇ ದಿನ ಮತ್ತೆ 463 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈವರೆಗಿನ ಒಟ್ಟು ಸಾವಿನ ಸಂಖ್ಯೆ 30 ಸಾವಿರ ದಾಟಿದೆ.
ಮಂಗಳವಾರವಷ್ಟೇ 14,859 ಪ್ರಕರಣಗಳೊಂದಿಗೆ ಕಳೆದ ಒಂದೂವರೆ ತಿಂಗಳ ಬಳಿಕ ಹದಿನೈದು ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಿದ್ದವು. ಆದರೆ ಬುಧವಾರ ಪ್ರಕರಣಗಳ ಸಂಖ್ಯೆ ತುಸು ಹೆಚ್ಚಾಗಿದೆ. ಸೋಂಕು ಸಂಖ್ಯೆ ಕೊಂಚ ಹೆಚ್ಚಾದರೂ ಪಾಸಿಟಿವಿಟಿ ದರ ಇನ್ನಷ್ಟುಕಡಿಮೆಯಾಗಿದೆ. 1.45 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದ್ದು ಪಾಸಿಟಿವಿಟಿ ಶೇ.11.22ಕ್ಕೆ ಇಳಿಕೆಯಾಗಿದೆ.
ಇದೇ ದಿನ 21,199 ಮಂದಿ ಗುಣಮುಖರಾಗಿದ್ದು,ಸಕ್ರಿಯ ಪ್ರಕರಣಗಳ ಸಂಖ್ಯೆ 2.93 ಲಕ್ಷಕ್ಕೆ ಇಳಿದಿದೆ. ಆದರೆ, ಕೋವಿಡ್ ಸೋಂಕಿತರ ಮರಣ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಮಂಗಳವಾರ ಶೇ.2.82 ರಷ್ಟು ರಣ ಪ್ರಮಾಣ ದರ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಮರಣ ಸಂಖ್ಯೆ ಹೆಚ್ಚಿದ್ದು 307 ಮಂದಿ ಸಾವನ್ನಪ್ಪಿದ್ದಾರೆ.
'ಲಸಿಕೆ ತಗೊಂಡ್ರೆ ಮಕ್ಕಳಾಗಲ್ಲ' ವದಂತಿಗಳಿಂದ ದೊಡ್ಡ ಸಮಸ್ಯೆ
ರಾಜ್ಯದಲ್ಲಿ ಈವರೆಗೆ ಒಟ್ಟು 26.35 ಲಕ್ಷ ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಪೈಕಿ 23.12 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಇದುವರೆಗಿನ ಒಟ್ಟು ಸಾವಿನ ಸಂಖ್ಯೆ 30,017ಕ್ಕೇರಿದೆ. ಇದುವರೆಗೆ ಒಟ್ಟು 2.99 ಕೋಟಿಗೂ ಹೆಚ್ಚು ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ 4095 ಪ್ರಕರಣಗಳು, ಮೈಸೂರಿನಲ್ಲಿ 1687, ಬೆಳಗಾವಿ 1006, ತುಮಕೂರು 882 ಪ್ರಕರಣಗಳು ದಾಖಲಾಗಿವೆ. ಉಳಿದ ಜಿಲ್ಲೆಗಳಲ್ಲಿ ಕನಿಷ್ಠ 79ರಿಂದ ಗರಿಷ್ಠ 636 ಪ್ರಕರಣಗಳ ವರೆಗೆ ಸೋಂಕು ದೃಢಪಟ್ಟಿವೆ. ಇನ್ನು ಸಾವಿನ ಸಂಖ್ಯೆ ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ಬೆಳಗಾವಿಯಲ್ಲಿ 17, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ತಲಾ 12, ಶಿವಮೊಗ್ಗದಲ್ಲಿ 10 ಸಾವಿನ ಪ್ರಕರಣಗಳು ವರದಿಯಾಗಿವೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ