
ಬೆಂಗಳೂರು (ಅ.14): ಕೊರೋನಾ ಸೋಂಕಿನ ವಿರುದ್ಧದ ಹೋರಾಟದ ಭಾಗವಾಗಿ ರಾಜ್ಯ ಸರ್ಕಾರವು ಕಳೆದ ಮಾರ್ಚಲ್ಲಿ ತಾತ್ಕಾಲಿಕವಾಗಿ 18 ಜಿಲ್ಲೆಗಳಿಗೆ ನೇಮಿಸಿದ್ದ ವೈದ್ಯರು ಸೇರಿದಂತೆ ಇನ್ನಿತರ ವೈದ್ಯಕೀಯ ಸಿಬ್ಬಂದಿಯ ಆರು ತಿಂಗಳ ಗುತ್ತಿಗೆ ಅವಧಿಯನ್ನು ಈ ವರ್ಷದ ಅಂತ್ಯದವರಗೆ ವಿಸ್ತರಿಸಿದೆ.
ಸೆಪ್ಟೆಂಬರ್ 30ಕ್ಕೆ ಈ ಸಿಬ್ಬಂದಿಯ ಗುತ್ತಿಗೆ ಅಥವಾ ಹೊರಗುತ್ತಿಗೆ ಅವಧಿ ಮುಕ್ತಾಯಗೊಂಡಿತ್ತು. ರಾಜ್ಯದಲ್ಲಿ ಪ್ರಸಕ್ತ ಕೊರೋನಾ ಸೋಂಕಿನ ಹಬ್ಬುವಿಕೆ ಉತ್ತುಂಗಕ್ಕೆ ತಲುಪಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಸಿಬ್ಬಂದಿಯ ಗುತ್ತಿಗೆ ಅವಧಿಯನ್ನು ಡಿಸೆಂಬರ್ ಕೊನೆಯವರೆಗೆ ವಿಸ್ತರಿಸಿದೆ.
ಕೊರೋನಾ ನಿಯಂತ್ರಣದಲ್ಲಿ ಆರೋಗ್ಯ ಸೇತು ಆ್ಯಪ್ ಪ್ರಮಖ ಪಾತ್ರ; WHO ಮೆಚ್ಚುಗೆ! .
ಪ್ರತಿ ಜಿಲ್ಲೆಗೆ 10 ವೈದ್ಯರು, 20 ಶುಶ್ರೂಷಕರು, 5 ಪ್ರಯೋಗಶಾಲಾ ತಂತ್ರಜ್ಞರು, 10 ಗ್ರೂಪ್ ಡಿ ಸಿಬ್ಬಂದಿ ಹೀಗೆ ಒಟ್ಟು 45 ಮಂದಿಯನ್ನು ನೇಮಿಸಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ