ಗುತ್ತಿಗೆ ವೈದ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

Kannadaprabha News   | Asianet News
Published : Oct 14, 2020, 07:09 AM IST
ಗುತ್ತಿಗೆ ವೈದ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಸಾರಾಂಶ

ಗುತ್ತಿಗೆ ಆಧಾರದ ಮೇಲೆ ತೆಗೆದುಕೊಂಡಿದ್ದ ವೈದ್ಯರ ಸೇವೆಯನ್ನು ರಾಜ್ಯ ಸರ್ಕಾರ ಮತ್ತಷ್ಟು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು (ಅ.14): ಕೊರೋನಾ ಸೋಂಕಿನ ವಿರುದ್ಧದ ಹೋರಾಟದ ಭಾಗವಾಗಿ ರಾಜ್ಯ ಸರ್ಕಾರವು ಕಳೆದ ಮಾರ್ಚಲ್ಲಿ ತಾತ್ಕಾಲಿಕವಾಗಿ 18 ಜಿಲ್ಲೆಗಳಿಗೆ ನೇಮಿಸಿದ್ದ ವೈದ್ಯರು ಸೇರಿದಂತೆ ಇನ್ನಿತರ ವೈದ್ಯಕೀಯ ಸಿಬ್ಬಂದಿಯ ಆರು ತಿಂಗಳ ಗುತ್ತಿಗೆ ಅವಧಿಯನ್ನು ಈ ವರ್ಷದ ಅಂತ್ಯದವರಗೆ ವಿಸ್ತರಿಸಿದೆ.

 ಸೆಪ್ಟೆಂಬರ್‌ 30ಕ್ಕೆ ಈ ಸಿಬ್ಬಂದಿಯ ಗುತ್ತಿಗೆ ಅಥವಾ ಹೊರಗುತ್ತಿಗೆ ಅವಧಿ ಮುಕ್ತಾಯಗೊಂಡಿತ್ತು. ರಾಜ್ಯದಲ್ಲಿ ಪ್ರಸಕ್ತ ಕೊರೋನಾ ಸೋಂಕಿನ ಹಬ್ಬುವಿಕೆ ಉತ್ತುಂಗಕ್ಕೆ ತಲುಪಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಸಿಬ್ಬಂದಿಯ ಗುತ್ತಿಗೆ ಅವಧಿಯನ್ನು ಡಿಸೆಂಬರ್‌ ಕೊನೆಯವರೆಗೆ ವಿಸ್ತರಿಸಿದೆ. 

ಕೊರೋನಾ ನಿಯಂತ್ರಣದಲ್ಲಿ ಆರೋಗ್ಯ ಸೇತು ಆ್ಯಪ್ ಪ್ರಮಖ ಪಾತ್ರ; WHO ಮೆಚ್ಚುಗೆ! .

ಪ್ರತಿ ಜಿಲ್ಲೆಗೆ 10 ವೈದ್ಯರು, 20 ಶುಶ್ರೂಷಕರು, 5 ಪ್ರಯೋಗಶಾಲಾ ತಂತ್ರಜ್ಞರು, 10 ಗ್ರೂಪ್‌ ಡಿ ಸಿಬ್ಬಂದಿ ಹೀಗೆ ಒಟ್ಟು 45 ಮಂದಿಯನ್ನು ನೇಮಿಸಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ
ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ