
ಬೆಂಗಳೂರು (ಜು.06): ಕರ್ನಾಟಕದಿಂದ ಬರುವ ಪ್ರಯಾಣಿಕರು ಕೊರೋನಾ ನೆಗೆಟಿವ್ ವರದಿ ಹೊಂದಿರಬೇಕು ಎಂದು ಉತ್ತರ ಗೋವಾ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದಿಂದ ಗೋವಾಕ್ಕೆ ಹೋಗುವ ಪ್ರಯಾಣಿಕರು ಕಡ್ಡಾಯವಾಗಿ ಕೊರೋನಾ ನೆಗೆಟಿವ್ ವರದಿ ಹೊಂದಿರಬೇಕು ಎಂದು ಕೆಎಸ್ಆರ್ಟಿಸಿ ಸೂಚಿಸಿದೆ.
ಜುಲೈ 6 ರಿಂದ ಗೋವಾ ರಾಜ್ಯಕ್ಕೆ ಸಾರಿಗೆ ಬಸ್ಗಳ ಕಾರ್ಯಾಚರಣೆ ಪುನರಾರಂಭಿಸಲಿದೆ. ಈ ಹಿನ್ನೆಲೆಯಲ್ಲಿ ನಿಗಮದ ಬಸ್ಸುಗಳಲ್ಲಿ ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಪ್ರಯಾಣ ಬೆಳೆಸುವವರು 72 ಗಂಟೆಗಳ ಒಳಗೆ ಪರೀಕ್ಷೆ ಮಾಡಿಸಿರುವ ವರದಿ ಕಡ್ಡಾಯವಾಗಿ ಹೊಂದಿರಬೇಕು.
ಡೆಲ್ಟಾಪ್ಲಸ್ ಆತಂಕ: ಗೋವಾ ಗಡಿ ಬಂದ್
ಪ್ರಯಾಣಿಕರು ವರದಿಯ ಸಾಫ್ಟ್ ಕಾಪಿ ಹೊಂದಿರುವುದನ್ನು ಆಯಾ ಬಸ್ ನಿರ್ವಾಹಕರು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳಬೇಕು. ಈ ಕುರಿತು ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮುಖ್ಯ ಸಂಚಾರ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ