
ಬೆಂಗಳೂರು [ಮಾ.20] : ದೇಶದಲ್ಲಿ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಈ ನಿಟ್ಟಿನಲ್ಲಿ ಮಾರ್ಚ್ 22 ರಂದು ಕೇಂದ್ರ ಸರ್ಕಾರ ಜನತಾ ಕರ್ಫ್ಯೂ ಜಾರಿ ಹಿನ್ನೆಲೆ ಸಂಪೂರ್ಣ ಬಂದ್ ಆಗಲಿದೆ.
ಇನ್ನು ಜನತಾ ಕರ್ಫ್ಯೂ ಹಿನ್ನೆಲೆ ರಾಜ್ಯದ ಎಲ್ಲೆಡೆ ಸಣ್ಣ - ಪುಟ್ಟ ಹಾಗೂ ಸ್ಟಾರ್ ಹೋಟೆಲ್ ಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಎಲ್ಲಾ ಹೋಟೆಲ್ ಗಳನ್ನು ಬಂದ್ ಮಾಡಲು ಆದೇಶಿದಿದೆ.
ಅಂದು ಯಾರೂ ಮನೆಯಿಂದ ಹೊರಕ್ಕೆ ಬಾರದಂತೆ ಕೇಂದ್ರ ಸರ್ಕಾರ ಕರೆ ನೀಡಿದ್ದು, ಈ ನಿಟ್ಟಿನಲ್ಲಿ ಹೋಟೆಲ್ ಗಳನ್ನು ಬಂದ್ ಮಾಡಲಾಗುತ್ತಿದೆ. ಇನ್ನು ಹಲವು ರೀತಿಯ ಮಳಿಗೆಗಳನ್ನು ಕೂಡ ಜನತಾ ಕರ್ಫ್ಯೂ ಹಿನ್ನೆಲೆ ಬಂದ್ ಮಾಡಲಾಗುತ್ತಿದೆ.
"
ಕೊರೋನಾ ಭೀತಿ: ಮಹಾರಾಷ್ಟ್ರಕ್ಕೆ ಬಸ್ ಸಂಪೂರ್ಣ ಸ್ಥಗಿತ...
ಚಿನ್ನದ ಅಂಗಡಿ ಬಂದ್ : ಇನ್ನು ಮಾರ್ಚ್ 21 ರಿಂದಲೇ ಬೆಂಗಳೂರಿನ ಎಲ್ಲಾ ಚಿನ್ನದ ಅಂಗಡಿಗಳು 8 ದಿನಗಳ ಕಾಲ ಬಂದ್ ಆಗಲಿವೆ. ಕೊರೋನಾ ಎಫೆಕ್ಟ್ ಹಿನ್ನೆಲೆ ಚಿನ್ನದ ಅಂಗಡಿಗಳಲ್ಲಿ ಹೆಚ್ಚು ಜನ ಸೇರಿವ ಹಿನ್ನೆಲೆ ಚಿನ್ನದ ಅಂಗಡಿಗಳನ್ನು ಬಂದ್ ಮಾಡಲಾಗುತ್ತಿದೆ.
ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದೇವೆ: ಡಾ. ಸುಧಾಕರ್...
ಬೆಂಗಳೂರಿನ ಚಿನ್ನದ ಅಂಡಿಗಳನ್ನು ಮುಚ್ಚಲು ಜ್ಯುವೆಲರಿ ಅಸೋಸಿಯೇಷನ್ ನಿರ್ಧಾರ ಮಾಡಿದೆ.
ದೇಶದಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 200ರ ಗಡಿ ದಾಟಿದ್ದು, ಸಾವಿನ ಸಂಖ್ಯೆ 5 ಆಗಿದೆ. ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಭಾನುವಾರ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ.
"
ಮಾರ್ಚ್ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ