ಕೋವಿಡ್‌ ಮಾರಣಾಂತಿಕ ಕಾಯಿಲೆ ಅಲ್ಲ: ಕೊರೋನಾ ಗೆದ್ದವರ ಅನುಭವದ ಮಾತಿದು..!

Kannadaprabha News   | Asianet News
Published : Jul 27, 2020, 09:44 AM ISTUpdated : Jul 27, 2020, 10:02 AM IST
ಕೋವಿಡ್‌ ಮಾರಣಾಂತಿಕ ಕಾಯಿಲೆ ಅಲ್ಲ: ಕೊರೋನಾ ಗೆದ್ದವರ ಅನುಭವದ ಮಾತಿದು..!

ಸಾರಾಂಶ

ವದಂತಿಗಳಿಗೆ ಕಿವಿಗೊಡಬೇಡಿ| ಆರೋಗ್ಯ ಇಲಾಖೆ ಸಿಬ್ಬಂದಿ ಅನುಭವದ ಮಾತು| ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ತಮ್ಮನ್ನು ಕರೆದೊಯ್ಯುವ ವಾಹನ ಚಾಲಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು| ಅವರೊಂದಿಗೆ ಪ್ರತಿದಿನ ಕಚೇರಿಗೆ ಹೋಗುತ್ತಿದ್ದ ಎಲ್ಲ ಸಿಬ್ಬಂದಿಯನ್ನು ಖಾಸಗಿ ಹೋಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿಡಲಾಗಿತ್ತು|

ಬೆಂಗಳೂರು(ಜು.27): ವದಂತಿಗಳಿಗೆ ಕಿವಿಗೊಡದೇ ಮನಸ್ಸು ಗಟ್ಟಿ ಮಾಡಿಕೊಂಡು ಜನರಿಂದ ದೂರ ಉಳಿದಲ್ಲಿ ಕೊರೋನಾ ಸೋಂಕಿನಿಂದ ಶೀಘ್ರ ಗುಣಮುಖರಾಗಬಹುದು, ಕೊರೋನಾ ಮಾರಣಾಂತಿಕ ಕಾಯಿಲೆ ಅಲ್ಲ, ಬೇರೆ ಯಾವುದೇ ಗಂಭೀರ ಕಾಯಿಲೆ ಇಲ್ಲದಿದ್ದರೆ ಜೀವಕ್ಕೆ ಏನೂ ಅಪಾಯವಿಲ್ಲ. ಸೋಂಕು ತಗುಲಿ ಚಿಕಿತ್ಸೆಯಿಂದ ಗುಣಮುಖರಾಗಿರುವ ಆರೋಗ್ಯ ಇಲಾಖೆಯ ಕ್ಷಯರೋಗಿಗಳ ವಿಭಾಗದ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರ ಅನುಭವದ ಮಾತಿದು.

‘ಕನ್ನಡಪ್ರಭ’ ಜೊತೆ ಮಾತನಾಡಿದ ಅವರು, ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ತಮ್ಮನ್ನು ಕರೆದೊಯ್ಯುವ ವಾಹನ ಚಾಲಕನಿಗೆ ಜೂ.18ಕ್ಕೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅವರೊಂದಿಗೆ ಪ್ರತಿದಿನ ಕಚೇರಿಗೆ ಹೋಗುತ್ತಿದ್ದ ಎಲ್ಲ ಸಿಬ್ಬಂದಿಯನ್ನು ಖಾಸಗಿ ಹೋಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿಡಲಾಗಿತ್ತು. ಜೊತೆಗೆ, ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತು. ಈ ವೇಳೆ ನನ್ನ ಜೊತೆ ಸೇವೆ ಸಲ್ಲಿಸುವ ಸುಮಾರು 10ಕ್ಕೂ ಹೆಚ್ಚು ಮಂದಿಗೆ ಸೋಂಕಿರುವುದು ದೃಢಪಟ್ಟಿತ್ತು. ಜೂ.24ರಂದು ನನಗೂ ಸೋಂಕು ತಗುಲಿರುವುದು ದೃಢವಾಯಿತು. ಬಳಿಕ ಜಯನಗರದ ಜನರಲ್‌ ಆಸ್ಪತ್ರೆಯಲ್ಲಿ ಎರಡು ದಿನ ಚಿಕಿತ್ಸೆ ನೀಡಿ, ರವಿಶಂಕರ್‌ ಗುರೂಜಿ ಆಶ್ರಮದಲ್ಲಿ 10 ದಿನಗಳ ಕಾಲ ಆರೈಕೆ ಪಡೆದು ಗುಣಮುಖಳಾದೆ. ಜು.2ರಂದು ಮನೆಗೆ ಬಂದಿದ್ದೇನೆ ಎಂದು ವಿವರಿಸಿದರು.

ಕೊರೋನಾ ಸೋಂಕಿತನ ಪರದಾಟ: 4 ದಿನದಿಂದ ಕಾದರೂ ಬರಲಿಲ್ಲ ಆ್ಯಂಬುಲೆನ್ಸ್‌

ಆಶ್ರಮದಲ್ಲಿ ಪೌಷ್ಟಿಕಾಂಶಭರಿತ ಆಹಾರ ನೀಡುತ್ತಿದ್ದರು. ಜತೆಗೆ ರೋಗ ನಿರೋಧಕ ಮಾತ್ರೆಗಳು ನೀಡುತ್ತಿದ್ದರು. ಜೊತೆಯಲ್ಲಿ ಇದ್ದ ಬೇರೆಯವರ ಜೊತೆ ಆರಾಮವಾಗಿ ದಿನ ಕಳೆಯುತ್ತಿದ್ದೆ. ನಮ್ಮ ಜೊತೆ ಇದ್ದ ಯಾರಿಗೂ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗಲಿಲ್ಲ. ಎಲ್ಲರೂ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕು ತಗುಲಿದೆ ಎಂಬ ಭೀತಿಯಿಂದ ಕೆಲವರು ಆತ್ಮಹತ್ಯೆಗೆ ಶರಣಾಗುವುದು ಅತ್ಯಂತ ಮೂರ್ಖತನದ ನಿರ್ಧಾರ ಎಂದರು.

ನೆರೆಹೊರೆಯವರಿಂದ ಮಾನಸಿಕ ಹಿಂಸೆ!

ಕೊರೋನಾ ಸೋಂಕಿತರನ್ನು ಜನರು ಅಸ್ಪ್ರಶ್ಯರಂತೆ ನೋಡುತ್ತಾರೆ. ನಮ್ಮ ಮಕ್ಕಳನ್ನು ಮಾತನಾಡುವುದಕ್ಕೂ ನೆರೆಹೊರೆಯವರು ಹಿಂಜರಿಯುತ್ತಿದ್ದಾರೆ. ನಮ್ಮ ಕುಟುಂಬವೇ ವೈರಸ್‌ನ್ನು ಸೃಷ್ಟಿಮಾಡಿ ಇತರರಿಗೆ ಹರಡುತ್ತಿರುವಂತೆ ನೋಡಿದರು. ಈ ವಿಷಯದಲ್ಲಿ ಮಾನಸಿಕವಾಗಿ ಸಾಕಷ್ಟು ನೊಂದಿದ್ದೇನೆ. ನೆನಪಿಸಿಕೊಂಡರೆ ಈಗಲೂ ಬೇಸರವಾಗುತ್ತಿದೆ. ಈ ಹಿಂಸೆಯಿಂದಾಗಿ ಮೂರು ಕೆ.ಜಿ ತೂಕ ಕಡಿಮೆಯಾಗಿದ್ದೇನೆ. ಜನರಲ್ಲಿನ ಈ ವರ್ತನೆ ಬದಲಾಗಬೇಕು ಎಂದು ಮನವಿ ಮಾಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!