ಎಚ್ಚರ : ಗರಿಷ್ಠ ಸೋಂಕಿತರು ಪತ್ತೆ - ಹೆಚ್ಚಿದ ಆತಂಕ

Kannadaprabha News   | Asianet News
Published : Feb 27, 2021, 07:12 AM ISTUpdated : Feb 27, 2021, 07:30 AM IST
ಎಚ್ಚರ :  ಗರಿಷ್ಠ ಸೋಂಕಿತರು ಪತ್ತೆ - ಹೆಚ್ಚಿದ ಆತಂಕ

ಸಾರಾಂಶ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಅತ್ಯಂತ ಹೆಚ್ಚಾಗುತ್ತಿದೆ. ಇದರಿಂದ ಆತಂಕ ಮನೆ ಮಾಡಿದೆ. ಗರಿಷ್ಠ ಪ್ರಕರಣಗಳು ಪತ್ತೆಯಾಗುತ್ತಿವೆ. 

ಬೆಂಗಳೂರು (ಫೆ.27):  ಶುಕ್ರವಾರ ರಾಜ್ಯದಲ್ಲಿ 571 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಫೆಬ್ರವರಿ ತಿಂಗಳಲ್ಲಿ ದಿನವೊಂದರಲ್ಲಿ ಪತ್ತೆಯಾದ ಗರಿಷ್ಠ ಪ್ರಮಾಣದ ಸೋಂಕಿತರ ಸಂಖ್ಯೆ ಇದಾಗಿದೆ. ಈ ನಡುವೆ ಸೋಂಕಿನಿಂದ 642 ಮಂದಿ ಗುಣಮುಖರಾಗಿದ್ದಾರೆ. ನಾಲ್ಕು ಮಂದಿ ಮರಣವನ್ನಪ್ಪಿದ್ದಾರೆ.

ಈ ತಿಂಗಳಲ್ಲಿ ಎರಡನೇ ಬಾರಿ (ಫೆ. 6ರಂದು 531 ಸೋಂಕಿತರು) ಐನೂರಕ್ಕಿಂತ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಪ್ರಸ್ತುತ 5,501 ಸಕ್ರಿಯ ಪ್ರಕರಣಗಳಿದ್ದು 121 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 9.50 ಲಕ್ಷ ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಪೈಕಿ 9.32 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 12,320 ಮಂದಿ ಮೃತರಾಗಿದ್ದಾರೆ.

ಈ ತಿಂಗಳಲ್ಲೇ ಅತಿ ಹೆಚ್ಚು ಕೊರೋನಾ ಪರೀಕ್ಷೆ (76,799) ಕೂಡ ಶುಕ್ರವಾರವೇ ನಡೆದಿದೆ. ಫೆ. 5ರಿಂದ ರಾಜ್ಯದಲ್ಲಿ ಕೊರೋನಾ ಪರೀಕ್ಷೆಯ ಪ್ರಮಾಣ 75 ಸಾವಿರದ ಗಡಿ ದಾಟಿರಲಿಲ್ಲ.

ಕರ್ನಾಟಕದಲ್ಲಿ ಹೊಸ ಕೊರೋನಾ ಸಂಖ್ಯೆಯಲ್ಲಿ ಕೊಂಚ ಏರಿಕೆ, 2ನೇ ಅಲೆ ಶುರುವಾಯ್ತಾ? ..

ಬೆಂಗಳೂರು ನಗರದಲ್ಲಿ ಮೂವರು, ಹಾಸನ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಬೆಂಗಳೂರು ನಗರದಲ್ಲಿ 368, ಮೈಸೂರು 36, ದಕ್ಷಿಣ ಕನ್ನಡದಲ್ಲಿ 22 ಮಂದಿಯಲ್ಲಿ ಹೊಸದಾಗಿ ಸೋಂಕು ವರದಿಯಾಗಿದೆ.

ಲಸಿಕೆ ಅಭಿಯಾನ: ರಾಜ್ಯದಲ್ಲಿ ಶುಕ್ರವಾರ 814 ಲಸಿಕಾ ಕೇಂದ್ರಗಳಲ್ಲಿ 21,888 ಮಂದಿಗೆ ಕೋವಿಡ್‌ ಲಸಿಕೆಯನ್ನು ನೀಡಲಾಗಿದೆ. ಒಟ್ಟು 83,166 ಮಂದಿಗೆ ಲಸಿಕೆ ನೀಡುವ ಗುರಿಯಿದ್ದರೂ ಶೇ.74 ಮಂದಿ ಫಲಾನುಭವಿಗಳು ಲಸಿಕೆ ಪಡೆದಿಲ್ಲ. ರಾಜ್ಯದಲ್ಲಿ ಈವರೆಗೆ 4.47 ಲಕ್ಷ ಮಂದಿ ಆರೋಗ್ಯ ಕಾರ್ಯಕರ್ತರು, 1.58 ಲಕ್ಷ ಮುಂಚೂಣಿ ಕಾರ್ಯಕರ್ತರು ಲಸಿಕೆ ಪಡೆದಿದ್ದಾರೆ. 2.06 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯ ಎರಡನೇ ಡೋಸ್‌ ಕೂಡ ನೀಡಲಾಗಿದೆ.

2 ದಿನ ಲಸಿಕೆ ಅಭಿಯಾನ ಸ್ಥಗಿತ: ಈ ಮಧ್ಯೆ ಕೋವಿನ್‌ 1.0 ಪೋರ್ಟಲ್‌ ಅನ್ನು ಕೋವಿನ್‌ 2.0 ಪೋರ್ಟಲ್‌ ಆಗಿ ಪರಿವರ್ತಿಸುವ ಕಾರಣದಿಂದ ಶನಿವಾರ ಮತ್ತು ಭಾನುವಾರ ಲಸಿಕೆ ಅಭಿಯಾನ ನಡೆಯುವುದಿಲ್ಲ ಎಂದು ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ