
ಬೆಂಗಳೂರು(ಆ.13): ಡಿ.ಜೆ.ಹಳ್ಳಿ ಗಲಭೆ ವೇಳೆ ಪೊಲೀಸರ ಗುಂಡೇಟಿನಿಂದ ಮೃತಪಟ್ಟ ಮೂವರ ಪೈಕಿ ಇಬ್ಬರಿಗೆ ವ್ಯಕ್ತಿಗಳಿಗೆ ಮರಣೋತ್ತರ ಪರೀಕ್ಷೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
"
ಮಂಗಳವಾರ ರಾತ್ರಿ ಡಿ.ಜೆ.ಹಳ್ಳಿಯಲ್ಲಿ ಸ್ಥಳೀಯ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸ ಹಾಗೂ ಪೊಲೀಸ್ ಠಾಣೆ ಮುಂಭಾಗ ಪುಂಡರ ಗುಂಪು ನಡೆಸಿದ ಗಲಭೆ ನಿಯಂತ್ರಿಸಲು ಪೊಲೀಸರು ನಡೆಸಿದ ಫೈರಿಂಗ್ ವೇಳೆ ಮೂವರು ಮೃತಪಟ್ಟಿದ್ದರು. ಬಳಿಕ ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ವರ್ಗಾಯಿಸಿ ಮರಣೋತ್ತರ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ, ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಗಲಭೆಯಲ್ಲಿ ಮನೆ ಕಳೆದುಕೊಂಡ ಶಾಸಕ ಅಖಂಡ ಹೋಟೆಲ್ನಲ್ಲಿ!
ಸೋಂಕು ದೃಢಪಟ್ಟ ಇಬ್ಬರ ಮೃತದೇಹವನ್ನು ಸರ್ಕಾರದ ಮಾರ್ಗಸೂಚಿ ಅನುಸಾರ ಸುರಕ್ಷಾ ಕ್ರಮಗಳನ್ನು ಅನುಸರಿಸಿ ಬಿಬಿಎಂಪಿ ಸಿಬ್ಬಂದಿ ಟ್ಯಾನರಿ ರಸ್ತೆಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಿದ್ದಾರೆ. ಇನ್ನು, ಸೋಂಕು ದೃಢಪಡದ ಮತ್ತೋರ್ವ ವ್ಯಕ್ತಿಯ ಮೃತದೇಹವನ್ನು ಕುಟುಂಬವರಿಗೆ ಹಸ್ತಾಂತರಿಸಲಾಗಿದೆ. ಅವರು ಕೂಡ ಇದೇ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ