Covid Guideline; ಕೊರೋನಾ ನಿರ್ಬಂಧ: ಇಂದು ಮಹತ್ವದ ಸಭೆ

Published : Dec 26, 2022, 09:38 AM IST
Covid Guideline; ಕೊರೋನಾ ನಿರ್ಬಂಧ: ಇಂದು ಮಹತ್ವದ ಸಭೆ

ಸಾರಾಂಶ

ವಿದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಮತ್ತಷ್ಟುಬಿಗಿ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸೋಮವಾರ ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮತ್ತು ಕಂದಾಯ ಸಚಿವ ಆರ್‌.ಅಶೋಕ್‌ ನೇತೃತ್ವದಲ್ಲಿ ಅಧಿಕಾರಿಗಳು, ತಜ್ಞರ ಸಭೆ ನಡೆಯಲಿದೆ

ಬೆಂಗಳೂರು (ಡಿ.26) : ವಿದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಮತ್ತಷ್ಟುಬಿಗಿ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸೋಮವಾರ ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮತ್ತು ಕಂದಾಯ ಸಚಿವ ಆರ್‌.ಅಶೋಕ್‌ ನೇತೃತ್ವದಲ್ಲಿ ಅಧಿಕಾರಿಗಳು, ತಜ್ಞರ ಸಭೆ ನಡೆಯಲಿದೆ.

ಪ್ರಮುಖವಾಗಿ ಮುಂಬರುವ ಹೊಸ ವರ್ಷದ ಸ್ವಾಗತ ಕಾರ್ಯಕ್ರಮಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಯೋಜನೆ ಮತ್ತು ಸಂಭ್ರಮಾಚರಣೆಗಳಗೆ ನಿರ್ಬಂಧ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್‌್ಕ ಕಡ್ಡಾಯ, ಲಸಿಕೆ ಏರಿಕೆ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗಲಿದೆ. ಆ ಬಳಿಕ ತೀರ್ಮಾನಗಳ ಆಧರಿಸಿ ಹೊಸ ಮಾರ್ಗಸೂಚಿ ಹೊರ ಬೀಳುವ ಸಾಧ್ಯತೆಗಳಿವೆ.

ಲಸಿಕೆ ಹಾಕಿಸಿಕೊಂಡವರಿಗೂ ಮತ್ತೆ ವಕ್ಕರಿಸುತ್ತೆ ಕೋವಿಡ್, ರೋಗ ಲಕ್ಷಣಗಳೇನು ?

ಕೊರೋನಾ ರೂಪಾಂತರದ ಓಮಿಕ್ರೋನ್‌ ಬಿಎಫ್‌.7 ಒಬ್ಬರಿಂದ 17 ರಿಂದ 18 ಜನರಿಗೆ ಹರಡುವ ಸಾಧ್ಯತೆಗಳಿವೆ. ವಿದೇಶಗಳಲ್ಲಿ ನಿತ್ಯ 50 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸದ್ಯಕ್ಕೆ ರಾಜ್ಯ ಸರ್ಕಾರ ಲಾಕ್‌ಡೌನ್‌ನಂತಹ ಯಾವುದೇ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಈಗಾಗಲೇ ಸ್ಪಷ್ಪಪಡಿಸಿದೆ. ಆದರೆ, ಹೊಸ ವರ್ಷ ಸಮೀಪಿಸುತ್ತಿದ್ದು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ಜೋರಿರಲಿದೆ. ಅದರಲ್ಲೂ ಕಳೆದ ಎರಡು ವರ್ಷ (2021 ಹಾಗೂ 2022ರಲ್ಲಿ) ಸಂಪೂರ್ಣ ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ಭರ್ಜರಿಯಾಗಿ ಹೊಸ ವರ್ಷ ಸ್ವಾಗತಕ್ಕೆ ಜನರು ಸಜ್ಜಾಗಿದ್ದಾರೆ. ಒಂದು ವೇಳೆ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಲ್ಲಿಯೂ ಹೆಚ್ಚಳವಾಗಬಹುದು ಎಂಬ ಆತಂಕದಲ್ಲಿ ರಾಜ್ಯ ಸರ್ಕಾರವಿದೆ.

ಜನರ ನಿರ್ಲಕ್ಷ್ಯ:

ಇನ್ನೊಂದೆಡೆ ಕಳೆದ ವಾರ ಆರೋಗ್ಯ ಇಲಾಖೆಯಿಂದ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಮಾಸ್‌್ಕ ಧರಿಸುವಂತೆ, ಸೋಂಕು ಲಕ್ಷಣ ಇದ್ದರೆ ಪರೀಕ್ಷೆಗೊಳಗಾಗುವಂತೆ, ಮೂರನೇ ಡೋಸ್‌ ಲಸಿಕೆ ಪಡೆಯುವಂತೆ ಸಲಹೆಗಳನ್ನು ನೀಡಲಾಗಿತ್ತು. ಆದರೆ, ಬಹುತೇಕರು ಈ ಸಲಹೆಗಳನ್ನು ಗಾಳಿಗೆ ತೂರಿದ್ದಾರೆ. ವರ್ಷಾಂತ್ಯದ ಪ್ರವಾಸ, ಸಭೆ ಸಮಾರಂಭಗಳ ಆಯೋಜನೆ ಎಂದಿನಂತೆ ನಡೆಯುತ್ತಿವೆ. ಪ್ರವಾಸಿ ಸ್ಥಳಗಳಲ್ಲಿ ಜನಜಂಗುಳಿ ಇದೆ. ಹೀಗಾಗಿ, ಒಂದಿಷ್ಟುಕಠಿಣ ಕ್ರಮಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ಜಾರಿಗೊಳಿಸುವ ಅನಿವಾರ್ಯತೆ ಸರ್ಕಾರ ಮನಗಂಡಿದೆ.

ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ?:

ಬೆಂಗಳೂರು ಹಾಗೂ ಇತರೆ ಭಾಗಗಳಿಗೆ ಪ್ರತ್ಯೇಕವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ರಾಜ್ಯದ ಕೊರೋನಾ ಸಕ್ರಿಯ ಪ್ರಕರಣಗಳಲ್ಲಿ ಶೇ.99 ರಷ್ಟುಬೆಂಗಳೂರಿನಲ್ಲಿವೆ. ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಅಲ್ಲದೆ, ಬೆಂಗಳೂರಿನ ಬ್ರಿಗೇಡ್‌ ರಸ್ತೆ ಸೇರಿದಂತೆ ಹೋಟೆಲ್‌, ರೆಸ್ಟೋರೆಂಟ್‌ ಸೇರಿ ಹಲವೆಡೆ ಹೊಸ ವರ್ಷದ ಸಂಭ್ರಮಾಚರಣೆಗಳು ಜೋರಿರುತ್ತದೆ. ಮೆಟ್ರೋ, ಸಾರಿಗೆ ಬಸ್‌ಗಳಲ್ಲಿ ಮಾಸ್‌್ಕ ಕಡ್ಡಾಯ, ಲಸಿಕೆ ಪ್ರಮಾಣ ಪತ್ರ ಕಡ್ಡಾಯ, ನಿರ್ದಿಷ್ಟಜನ ಮಿತಿ, ಸಮಯದ ಮಿತಿ ಒಳಗೊಂಡ ನಿಯಮಗಳನ್ನು ಜಾರಿಳಿಸಬಹುದು.

Covid Vaccine ಖರೀದಿ ಬಂದ್: ಸರ್ಕಾರದ ಬಳಿಯಿದೆ 6 ತಿಂಗಳಿಗೆ ಸಾಕಾಗುವಷ್ಟು ಲಸಿಕೆ ಸಂಗ್ರಹ

ಸದ್ಯ ಕೊರೋನಾ ನಿಯಂತ್ರಣದಲ್ಲಿ: ಸದ್ಯ ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದ ಕೊರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಸಿ ದರ ಶೇ.0.5 ರಷ್ಟಿದೆ. ಅಂದರೆ, ಸೋಂಕು ಪರೀಕ್ಷೆಗೊಳಗಾಗುವ 1 ಸಾವಿರ ಮಂದಿಯಲ್ಲಿ ಐದು ಮಂದಿಗೆ ಮಾತ್ರ ಸೋಂಕು ದೃಢಪಡುತ್ತಿದೆ. ಡಿಸೆಂಬರ್‌ ತಿಂಗಳಲ್ಲಿ ಹೊಸ ಪ್ರಕರಣಗಳು 20 ಆಸುಪಾಸಿನಲ್ಲಿದ್ದು, ಸೋಂಕಿತರ ಸಾವು ನಾಲ್ಕು ವರದಿಯಾಗಿವೆ. ಸದ್ಯ ಆಸ್ಪತ್ರೆಯಲ್ಲಿ ಐದು ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದು, 1200 ಮಂದಿ ಮನೆ ಆರೈಕೆಯಲ್ಲಿದ್ದಾರೆ. 2020 ಮತ್ತು 2021 ಡಿಸೆಂಬರ್‌ಗೆ ಹೋಲಿಸಿದರೆ ಈ ಬಾರಿ ಬಹುತೇಕ ನಿಯಂತ್ರಣದಲ್ಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ