
ಬೆಂಗಳೂರು, (ಏ.06): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಜೋರಾಗಿದ್ದು, ದಾಖಲಾಗುತ್ತಿರುವ ಸೋಂಕಿತ ಪ್ರಕರಣಗಳ ಸಂಖ್ಯೆ ಹಾಗೂ ಸಾಯುವವರ ಸಂಖ್ಯೆಯಲ್ಲೂ ಹೊಸ ದಾಖಲೆ ಬರೆಯುತ್ತಿದೆ.
ಹೌದು...ಇಂದು (ಮಂಗಳವಾರ) ಒಂದೇ ದಿನ ಬರೋಬ್ಬರಿ 6150 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳ ಪತ್ತೆಯಾಗಿದ್ದು, 39 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು 3487 ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಒಂದೇ ದಿನ ಲಕ್ಷ ಕೊರೋನಾ ಕೇಸ್, 478 ಸಾವು!
ಕರ್ನಾಟಕದಲ್ಲಿ ಒಟ್ಟು 1026584ಕ್ಕೆ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 968762 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12696 ಜನರು ಸಾವನ್ನಪ್ಪಿದ್ದಾರೆ. ಇನ್ನು ಪ್ರಸ್ತುತ ರಾಜ್ಯದಲ್ಲಿ 45107 ಸಕ್ರಿಯ ಪ್ರಕರಣಗಳಿವೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?
ಬಾಗಲಕೋಟೆ 18, ಬಳ್ಳಾರಿ 87, ಬೆಳಗಾವಿ 47, ಬೆಂಗಳೂರು ಗ್ರಾಮಾಂತರ 80, ಬೆಂಗಳೂರು 4266, ಬೀದರ್ 167, ಚಾಮರಾಜನಗರ 5, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 29, ಚಿತ್ರದುರ್ಗ 21, ದಕ್ಷಿಣ ಕನ್ನಡ 89, ದಾವಣಗೆರೆ 47, ಧಾರವಾಡ 43, ಗದಗ 12, ಹಾಸನ 110, ಹಾವೇರಿ 5, ಕಲಬುರಗಿ 261, ಕೊಡಗು 22, ಕೋಲಾರ 56, ಕೊಪ್ಪಳ 20, ಮಂಡ್ಯ 102, ಮೈಸೂರು 237, ರಾಯಚೂರು 29, ರಾಮನಗರ 14, ಶಿವಮೊಗ್ಗ 49, ತುಮಕೂರು 157, ಉಡುಪಿ 57, ಉತ್ತರ ಕನ್ನಡ 66, ವಿಜಯಪುರ 22, ಯಾದಗಿರಿ 16 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ