
ಬೆಂಗಳೂರು, (ಏ.07): ರಾಜ್ಯದಲ್ಲಿ ಕೊರೋನಾ ಸ್ಫೋಟವಾಗಿದ್ದು, ಇಂದು (ಶುಕ್ರವಾರ) ಒಂದೇ ದಿನ 7955 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 46 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,48,085 ಕ್ಕೆ ಏರಿಕೆಯಾಗಿದ್ರೆ, ಮೃತಪಟ್ಟವರ ಸಂಖ್ಯೆ 12,813ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ನೈಟ್ ಕರ್ಫ್ಯೂ: ಏನಿರುತ್ತೆ? ಏನಿಲ್ಲ? ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3220 ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಇದುವರೆಗೆ 9,77,169 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜ್ಯದಲ್ಲಿ ಬರೋಬ್ಬರಿ 58,084 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 378 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಫೋಟವಾಗಿದ್ದು, 5576 ಜನರಿಗೆ ಸೋಂಕು ತಗುಲಿದೆ. 29 ಜನ ಸೋಂಕಿತರು ಸಾವನ್ನಪ್ಪಿದ್ದು, 42,525 ಸಕ್ರಿಯ ಪ್ರಕರಣಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ