ಕೊಂದೇ ಬಿಡುವ ಕರೋನಾ ವೈರಸ್‌ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ

Kannadaprabha News   | Asianet News
Published : Jan 21, 2020, 08:33 AM IST
ಕೊಂದೇ ಬಿಡುವ ಕರೋನಾ ವೈರಸ್‌ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ

ಸಾರಾಂಶ

ಚೀನಾದಲ್ಲಿ ಕಾಣಿಸಿಕೊಂಡಿರುವ ಡೆಡ್ಲಿ ಕರೋನಾ ವೈರಸ್ ಬಗ್ಗೆ ಇದೀಗ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರಯಾಣಿಕರನ್ನು ತೀವ್ರ ತಪಾಸಣೆ ನಡೆಸಲಾಗುತ್ತಿದೆ. 

ಬೆಂಗಳೂರು [ಜ.21]:  ಭಾರತಕ್ಕೂ ಕರೋನಾ ವೈರಸ್‌ ಹರಡುವ ಭೀತಿ ಆವರಿಸಿದೆ. ಹೀಗಾಗಿ ‘ಕರೋನಾ ವೈರಸ್‌’ ಪತ್ತೆಯಾಗಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಸಾಂಕ್ರಾಮಿಕ ರೋಗಗಳ ವಿಭಾಗದ ಜಂಟಿ ನಿರ್ದೇಶಕ ಡಾ.ಬಿ.ಜಿ. ಪ್ರಕಾಶ್‌ ಕುಮಾರ್‌ ಹೇಳಿದ್ದಾರೆ.

ಚೀನಾದಲ್ಲಿ ಭಾರತೀಯ ಶಿಕ್ಷಕಿಗೆ ಕರೋನಾ ವೈರಸ್‌?.

ಈಗಾಗಲೇ ನಿಯಮಿತವಾಗಿ ಮಿಡಲ್‌ ಈಸ್ಟ್‌ ರೆಸ್ಪಿರೇಟರಿ ಸಿಂಡ್ರೋಮ್‌ (ಎಂಇಆರ್‌ಸ್‌) ಬಗ್ಗೆ ತಪಾಸಣೆ ನಡೆಯುತ್ತಿದೆ. ಇದೀಗ ಕರೋನಾ ವೈರಸ್‌ನಿಂದ ಚೀನಾದಲ್ಲಿ ಸಾವು ಸಂಭವಿಸಿರುವ ವರದಿ ಹಿನ್ನೆಲೆಯಲ್ಲಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿಚಕ್ಷಣ ದಳವನ್ನು ನಿಯೋಜಿಸುವ ಮೂಲಕ ಅಂತಹ ದೇಶಗಳಿಂದ ಆಗಮಿಸುವವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಸಾಮಾನ್ಯವಾಗಿ ಶಂಕಿತ ರೋಗಿಗಳಿಗೆ ತೀವ್ರ ಜ್ವರ, ತಲೆನೋವು, ಮೈಕೈ ನೋವು, ಮೂಗು ಸೋರುವಿಕೆ, ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬರುತ್ತವೆ. ಇದಕ್ಕೆ ಸಕಾಲದಲ್ಲಿ ಚಿಕಿತ್ಸೆ ದೊರೆಯದಿದ್ದರೆ ನ್ಯುಮೋನಿಯಾ ಮತ್ತು ಕೆಲ ಸಂದರ್ಭದಲ್ಲಿ ಸಾವು ಸಹ ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಶಂಕಿತರು ಹಾಗೂ ರೋಗಿಗಳ ಚಿಕಿತ್ಸೆಗಾಗಿ ಈಗಾಗಲೇ ರಾಜೀವ್‌ ಗಾಂಧಿ ಎದೆ ರೋಗ ಆಸ್ಪತ್ರೆಯಲ್ಲಿ 10 ಹಾಸಿಗೆ ಪ್ರತ್ಯೇಕ ವಾರ್ಡ್‌ ಸಿದ್ಧಪಡಿಸಲಾಗಿದೆ ಎಂದು ಪ್ರಕಾಶ್‌ ಕುಮಾರ್‌ ಮಾಹಿತಿ ನೀಡಿದರು.

ಜಗತ್ತಿನ ನಿದ್ದೆಗೆಡಿಸಿದೆ ಮಾರಕ ಕರೋನಾ ವೈರಸ್‌: ಏನಿದು ಕಾಯಿಲೆ? ಗುಣಲಕ್ಷಣಗಳೇನು?...

ಈ ಕರೋನಾ ವೈರಸ್‌ ಸಾಮಾನ್ಯವಾಗಿ ಒಂಟೆಗಳು, ಬಾವಲಿ ಮತ್ತು ಬೆಕ್ಕುಗಳಿಂದ ಹರಡುತ್ತದೆ. ಇವುಗಳ ಜತೆಗೆ ಮನುಷ್ಯರ ನಡುವೆ ಸಂಪರ್ಕ ಬೆಳೆದಾಗ ಕರೋನಾ ವೈರಸ್‌ ಹರಡುವ ಸಾಧ್ಯತೆಗಳಿವೆ. ಈ ವೈರಸ್‌ ವಾತಾವರಣದಲ್ಲಿ ಒಂದು ದಿನ ಪೂರ್ತಿ ಬದುಕುಳಿಯುವ ಸಾಮರ್ಥ್ಯ ಹೊಂದಿದ್ದು, ನೆಲಹಾಸಿನ ಮೇಲೆ ಇದು ದೀರ್ಘಕಾಲ ಜೀವಿಸುತ್ತದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಗ್ಯಾಸ್ ಸಿಲಿಂಡರ್ ಸ್ಫೋಟ - ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು