ರಾಜ್ಯದಲ್ಲಿ ಸಕ್ರಿಯ ಕೊರೋನಾ ಕೇಸ್‌ 30 ಸಾವಿರಕ್ಕಿಂತ ಇಳಿಕೆ..!

Kannadaprabha News   | Asianet News
Published : Nov 13, 2020, 09:18 AM ISTUpdated : Nov 13, 2020, 09:31 AM IST
ರಾಜ್ಯದಲ್ಲಿ ಸಕ್ರಿಯ ಕೊರೋನಾ ಕೇಸ್‌ 30 ಸಾವಿರಕ್ಕಿಂತ ಇಳಿಕೆ..!

ಸಾರಾಂಶ

ಗುರುವಾರ 2116 ಮಂದಿಗೆ ಸೋಂಕು, 3368 ಗುಣಮುಖ| ಸಕ್ರಿಯರು 29,470ಕ್ಕೆ ಕುಸಿತ| ಐಸಿಯನಲ್ಲಿ ಇರುವವರ ಸಂಖ್ಯೆ 797ಕ್ಕೆ ಇಳಿಮುಖ| ಗುರುವಾರ ಮತ್ತೆ 21 ಸೋಂಕಿತರ ಸಾವು| 

ಬೆಂಗಳೂರು(ನ.13): ರಾಜ್ಯದಲ್ಲಿ ಕೊರೋನಾ ಸೋಂಕಿನ ಉಬ್ಬರ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಗುರುವಾರ 2,116 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. 3,368 ಮಂದಿ ಗುಣಮುಖರಾಗಿದ್ದಾರೆ. 21 ಮಂದಿ ಮೃತರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 29,470ಕ್ಕೆ ಕುಸಿದಿದೆ. ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯಲ್ಲಿಯೂ ನಿರಂತರ ಇಳಿಕೆ ದಾಖಲಾಗುತ್ತಿದೆ. ನವೆಂಬರ್‌ 2ರಂದು 931 ಜನರು ತೀವ್ರ ನಿಗಾ ವಿಭಾಗದಲ್ಲಿ (ಐಸಿಯು) ಇದ್ದರು. ಈಗ 797 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ರಾಜ್ಯದಲ್ಲಿ 8.55 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 8.14 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ.

ಒಟ್ಟು ಮೃತರ ಸಂಖ್ಯೆ 11,474 ಕ್ಕೆ ಏರಿದೆ. 19 ಮಂದಿ ಕೋವಿಡ್‌ ರೋಗಿಗಳು ಅನ್ಯ ಕಾರಣದಿಂದ ಅಸುನೀಗಿದ್ದಾರೆ. ರಾಜ್ಯದ ಮರಣ ದರ ಶೇ.1.34 ರಷ್ಟಿದೆ. 1.15 ಲಕ್ಷ ಪರೀಕ್ಷೆ ನಡೆದಿದೆ. ಒಟ್ಟು 91.58 ಲಕ್ಷ ಪರೀಕ್ಷೆ ರಾಜ್ಯದಲ್ಲಿ ಈವರೆಗೆ ನಡೆದಿದೆ.

ಕೊರೋನಾ ಅಟ್ಟಹಾಸಕ್ಕೆ ಸದ್ದಿಲ್ಲದೆ ಮಸಣ ಸೇರಿದ ಜೀವಗಳು..!

ಬೆಂಗಳೂರಲ್ಲಿ ಹೆಚ್ಚು:

ಬೆಂಗಳೂರು ನಗರದಲ್ಲಿ 8 ಮಂದಿ ಮೃತರಾಗಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ 3, ಬಳ್ಳಾರಿ, ಧಾರವಾಡ ತಲಾ 2, ಹಾಸನ, ಕಲಬುರಗಿ, ಕೋಲಾರ, ಮೈಸೂರು, ರಾಯಚೂರು ಮತ್ತು ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು ಮರಣವನ್ನಪ್ಪಿದ್ದಾರೆ. ರಾಜ್ಯದ ಇಪ್ಪತ್ತು ಜಿಲ್ಲೆಗಳಲ್ಲಿ ಯಾರೂ ಮೃತ ಪಟ್ಟಿಲ್ಲ.

ಬೆಂಗಳೂರು ನಗರ ಜಿಲ್ಲೆಯಲ್ಲಿ 1069 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ ಬಾಗಲಕೋಟೆ 14, ಬಳ್ಳಾರಿ 41, ಬೆಳಗಾವಿ 54, ಬೆಂಗಳೂರು ಗ್ರಾಮಾಂತರ 43, ಬೀದರ್‌ 3, ಚಾಮರಾಜ ನಗರ 12, ಚಿಕ್ಕಬಳ್ಳಾಪುರ 24, ಚಿಕ್ಕಮಗಳೂರು 37, ಚಿತ್ರದುರ್ಗ 41, ದಕ್ಷಿಣ ಕನ್ನಡ 53, ದಾವಣಗೆರೆ 29, ಧಾರವಾಡ 18, ಗದಗ 5, ಹಾಸನ 100, ಹಾವೇರಿ 6, ಕಲಬುರಗಿ 51, ಕೊಡಗು 8, ಕೋಲಾರ 18, ಕೊಪ್ಪಳ 28, ಮಂಡ್ಯ 74, ಮೈಸೂರು 115, ರಾಯಚೂರು 9, ರಾಮನಗರ 12, ಶಿವಮೊಗ್ಗ 51, ತುಮಕೂರು 80, ಉಡುಪಿ 31, ಉತ್ತರ ಕನ್ನಡ 32, ವಿಜಯಪುರ 51 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 7 ಹೊಸ ಪ್ರಕರಣಗಳು ಧೃಢ ಪಟ್ಟಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉಡುಪಿ: ಧರ್ಮ-ಸಂವಿಧಾನ ಬೇರೆಯಲ್ಲ:-ಪವನ್ ಕಲ್ಯಾಣ ಬಣ್ಣನೆ
ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?