ಕರ್ನಾಟಕ: ಒಂದೇ ವಾರದಲ್ಲಿ 24 ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಹೆಚ್ಚಳ

Published : Aug 07, 2022, 04:30 AM IST
ಕರ್ನಾಟಕ: ಒಂದೇ ವಾರದಲ್ಲಿ 24 ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಹೆಚ್ಚಳ

ಸಾರಾಂಶ

ಸೋಂಕು 30% ಏರಿಕೆ, ಪಾಸಿವಿಟಿಟಿ 1% ಹೆಚ್ಚಳ, ಮುನ್ನೆಚ್ಚರಿಕೆ ವಹಿಸಲು ರಾಜ್ಯಕ್ಕೆ ಕೇಂದ್ರ ಪತ್ರ

ಬೆಂಗಳೂರು(ಆ.07):  ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪತ್ರಬರೆದಿದೆ. ಮುಖ್ಯವಾಗಿ ಒಂದೇ ವಾರದಲ್ಲಿ ರಾಜ್ಯದ ಸೋಂಕು ಹೊಸ ಪ್ರಕರಣಗಳು ಶೇ.30 ಹೆಚ್ಚಿದ್ದು, 24 ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳ ಹೆಚ್ಚಳವನ್ನು ಗುರುತಿಸಿ ಅಗತ್ಯ ಕ್ರಮಕ್ಕೆ ಸೂಚಿಸಿದೆ. ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಸರಾಸರಿ 1,355 ಕೊರೋನಾ ಹೊಸ ಪ್ರಕರಣಗಳು ಪತ್ತೆಯಾಗಿವೆ. ಆಗಸ್ಟ್‌ ಮೊದಲ ವಾರ 2,000 ಆಸುಪಾಸಿಗೆ ಹೆಚ್ಚಿದೆ. ದೇಶಾದ್ಯಂತ ಕಳೆದ ಒಂದು ವಾರದಲ್ಲಿ ದಾಖಲಾದ ಹೊಸ ಪ್ರಕರಣಗಳ ಪೈಕಿ ಕರ್ನಾಟಕದಲ್ಲಿ ಶೇ.10.1 ವರದಿಯಾಗಿದೆ. ಜುಲೈ ಕೊನೆಯ ವಾರಕ್ಕೂ ಮತ್ತು ಆಗಸ್ಟ್‌ ಮೊದಲ ವಾರಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳು ಶೇ.30ರಷ್ಟು, ಪಾಸಿಟಿವಿಟಿ ದರ ಶೇ.1ರಷ್ಟು(ಶೇ.5.3 ರಿಂದ ಶೇ.6.3ಕ್ಕೆ ) ಹೆಚ್ಚಿದೆ. 24 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಒಂದು ಅಥವಾ ಎರಡು ಪಟ್ಟು ಅಧಿಕವಾಗಿವೆ. ಇನ್ನು ಏಳು ಜಿಲ್ಲೆಗಳಲ್ಲಿ ಪರೀಕ್ಷೆ ಪ್ರಮಾಣ ತಗ್ಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಹೆಚ್ಚು ಪ್ರಕರಣ ವರದಿಯಾಗುವ ಜಿಲ್ಲೆಗಳು, ಪಾಸಿಟಿವಿಟಿ ದರ, ಕ್ಲಸ್ಟರ್‌ಗಳ ಮೇಲೆ ಸೂಕ್ತ ನಿಗಾ ವಹಿಸಬೇಕು. ಜ್ವರ ಮತ್ತು ಉಸಿರಾಟ ಸಮಸ್ಯೆ ಹೆಚ್ಚಿರುವ ಪ್ರಕರಣಗಳ ಮೇಲೆ ಸೂಕ್ಷ್ಮ ನಿಗಾ ಇಡಬೇಕು. ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ವಂಶವಾಹಿ ಪರೀಕ್ಷೆಗೆ ಕ್ರಮ ಕೈಗೊಳ್ಳಬೇಕು. ಮಾರುಕಟ್ಟೆ, ಅಂತಾರಾಜ್ಯ ಬಸ್‌ ನಿಲ್ದಾಣಗಳು, ಶಾಲೆಗಳು, ಕಾಲೇಜುಗಳು, ರೈಲು ನಿಲ್ದಾಣಗಳಲ್ಲಿ ಕೊರೋನಾ ಮಾರ್ಗಸೂಚಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಲಸಿಕೆ ಪ್ರಮಾಣ ಹೆಚ್ಚಳದತ್ತ ಗಮನ ಇರಿಸಬೇಕು ಎಂದು ಪತ್ರದಲ್ಲಿ ಸೂಚಿಸಲಾಗಿದೆ.

ಕೋವಿಡ್‌ ಲಸಿಕೆ: ಫ್ರೀ 3ನೇ ಡೋಸ್‌ಗೆ ಭಾರೀ ಬೇಡಿಕೆ

ಸೋಂಕು ಹೆಚ್ಚಾಗಿರುವ ಜಿಲ್ಲೆಗಳು

ಒಂದು ವಾರದಲ್ಲಿ ಕೊರೋನಾ ಹೊಸ ಪ್ರಕರಣಗಳು ಬೆಳಗಾವಿ, ಹಾಸನ, ತುಮಕೂರು, ಕೊಡಗು, ರಾಯಚೂರು, ದಾವಣಗೆರೆ, ಹಾವೇರಿ ಹಾಗೂ ಚಿಕ್ಕಮಗಳೂರಿನಲ್ಲಿ ದುಪ್ಪಟ್ಟಾಗಿದೆ. ಮೈಸೂರು, ಮಂಡ್ಯ, ಕಲಬುರಗಿ, ಶಿವಮೊಗ್ಗ, ಚಾಮರಾಜನಗರ, ಕೊಪ್ಪಳ, ರಾಮನಗರದಲ್ಲಿ ಒಂದೂವರೆ ಪಟ್ಟಾಗಿವೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕೋಲಾರ, ಬಾಗಲಕೋಟೆ, ಉತ್ತರಕನ್ನಡ, ಬೀದರ್‌, ಉಡುಪಿ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಒಂದು ಪಟ್ಟು ಹೆಚ್ಚಳವಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!