
ಬೆಂಗಳೂರು, (ಆ.26): ಬೆಂಗಳೂರು ದಕ್ಷಿಣ ಭಾಗದಲ್ಲಿ ಪ್ರಕರಣ ಹೆಚ್ಚಾಗುತ್ತಿದ್ದು, ಸೋಂಕು ಕೈಮೀರಿ ಹೆಚ್ಚಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ದಕ್ಷಿಣ ವಲಯ ಕೋವಿಡ್ ಉಸ್ತುವಾರಿ ಸಚಿವ ಅಶೋಕ್ ಅವರು ಕಂದಾಯ ಸಚಿವರಾಗಿರುವುದರಿಂದ ಮಳೆ ಅವಾಂತರ, ಪ್ರವಾಹದ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗುತ್ತೆ. ಅಶೋಕ್ ಸಹ ಎರಡು ಮೂರು ಸಭೆ ನಡೆಸಿದ್ದಾರೆ. ಅಧಿಕಾರಿಗಳು ಎಲ್ಲಾ ರೀತಿಯ ಪ್ರಯತ್ನ ಮಾಡ್ತಿದ್ದಾರೆ. ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
ಹತೋಟಿಗೆ ಬಾರದ ಕೊರೋನಾ: ಹಿರಿಯ ಅಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಸಭೆ
ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿ, ಸರ್ಕಾರದ ಮಾರ್ಗಸೂಚಿಯನ್ನು ಜನರು ಪೂರ್ಣವಾಗಿ ಪಾಲಿಸಬೇಕು. ಆಗ ಮಾತ್ರ, ಕೊರೋನಾ ನಿಯಂತ್ರಣ ಮಾಡಬಹುದು. ಕೇವಲ ಸರ್ಕಾರದಿಂದ ಮಾತ್ರ ಇದು ಆಗೋಲ್ಲ, ಜನರ ಸಹಭಾಗಿತ್ವ ಇರಬೇಕು ಎಂದು ತಿಳಿಸಿದರು.
ಸೆಪ್ಟೆಂಬರ್ ನಲ್ಲಿ ಹೆಚ್ಚು ಸೋಂಕು ಸಾಧ್ಯತೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸುಧಾಕರ್, ಸದ್ಯ ಶೇ.70 ರಷ್ಟು ಗುಣಮುಖರಾಗಿದ್ದಾರೆ. ಶೇ.30 ರಷ್ಟು ಸಕ್ರಿಯ ಕೇಸ್ ಗಳಿವೆ. ಸೋಂಕು ಬಗ್ಗೆ ಆತಂಕ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸರ್ಕಾರದ ಮಾರ್ಗಸೂಚಿಯನ್ನ ಜನ ಅನುಸರಿಸಿದರೆ ಸೋಂಕು ಕೇಸ್ ಕಮ್ಮಿಯಾಗುತ್ತೆ. ಮೇ ನಲ್ಲಿ ಸಾವಿನ ಪ್ರಮಾಣ ಶೇ.3.5 ಇತ್ತು. ಈಗ ಸಾವಿನ ಪ್ರಮಾಣ ಶೇ.1.5 ಇದೆ. ಇದು ಈ ಸರ್ಕಾರದ ಸಾಧನೆ ಎಂದರು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ