ಕೊರೋನಾ ಭೀತಿ, ರಾಜ್ಯದಲ್ಲಿ 1345ಕ್ಕೂ ಅಧಿಕ ಜನರ ಮೇಲೆ ನಿಗಾ!

Published : Mar 14, 2020, 07:59 AM ISTUpdated : Mar 14, 2020, 01:48 PM IST
ಕೊರೋನಾ ಭೀತಿ, ರಾಜ್ಯದಲ್ಲಿ 1345ಕ್ಕೂ ಅಧಿಕ ಜನರ ಮೇಲೆ ನಿಗಾ!

ಸಾರಾಂಶ

ರಾಜ್ಯದಲ್ಲಿ 1345ಕ್ಕೂ ಅಧಿಕ ಜನರ ಮೇಲೆ ನಿಗಾ| ಕಲಬುರಗಿ, ಗದಗದಲ್ಲಿ ಅತಿ ಹೆಚ್ಚು ಶಂಕಿತರು

ಬೆಂಗಳೂರು[ಮಾ.14]: ಕೊರೋನಾ ವೈರಸ್‌ನಿಂದಾಗಿ ಕಲಬುರಗಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಕಟ್ಟೆಚ್ಚರವಹಿಸಲಾಗುತ್ತಿದೆ. ಮೃತಪಟ್ಟವ್ಯಕ್ತಿಯ ಕುಟುಂಬದವರು, ಈಗಾಗಲೇ ಸೋಂಕು ಪತ್ತೆಯಾಗಿರುವ ವ್ಯಕ್ತಿಗಳು ಮತ್ತು ವಿದೇಶದಿಂದ ಬಂದ ಶಂಕಿತರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 1345 ಜನರ ಮೇಲೆ ನಿಗಾ ವಹಿಸಲಾಗಿದೆ.

"

1 ವಾರ ಬಂದ್‌ನಿಂದ 20 ಸಾವಿರ ಕೋಟಿ ನಷ್ಟ!

ಕಲಬುರಗಿಯಲ್ಲಿ 46 ಜನರ ಮೇಲೆ ನಿಗಾ ವಹಿಸಲಾಗಿದೆ. ಇದರಲ್ಲಿ ಕೊರೋನಾ ವೈರಸ್‌ಗೆ ಮೃತಪಟ್ಟವ್ಯಕ್ತಿಯ ಕುಟುಂಬದವರು ಮತ್ತು ಇತ್ತೀಚೆಗೆ ವಿದೇಶದಿಂದ ಆಗಮಿಸಿದ ವ್ಯಕ್ತಿಗಳು ಸೇರಿದ್ದಾರೆ. ಗದಗದಲ್ಲಿ 41 ಜನರ ಮೇಲೆ ನಿಗಾ ವಹಿಸಲಾಗಿದೆ. ಇದರಲ್ಲಿ ಸಿಂಗಾಪುರ, ಮಲೇಷ್ಯಾ ಪ್ರವಾಸಕ್ಕೆ ತೆರಳಿದ್ದ ಲಕ್ಷ್ಮೇಶ್ವರ ಪಟ್ಟಣದ 17 ಜನ ಹಾಗೂ ಮೆಕ್ಕಾ ಮದೀನಾ ಪ್ರವಾಸಿ ಮುಗಿಸಿಕೊಂಡು ಬಂದಿರುವ 12 ಹಾಗೂ ಪಕ್ಕದ ಕೇರಳ ಸೇರಿದಂತೆ ದೇಶದಲ್ಲಿನ ಇನ್ನಿತರ ಭಾಗಗಳಿಂದ ಆಗಮಿಸಿರುವ 12 ಜನರ ಸೇರಿದ್ದಾರೆ.

ಕೊರೋನಾ ವೈರಸ್‌ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ಯಾರೊಬ್ಬರಲ್ಲಿಯೂ ಸೋಂಕು ಪತ್ತೆಯಾಗಿಲ್ಲ. ಆದರೆ, ವಿದೇಶದಿಂದ ಬಂದ ಒಬ್ಬರನ್ನು ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕವಾಗಿರಿಸಿ ನಿಗಾ ವಹಿಸಲಾಗಿದೆ. ಹಾಸನದಲ್ಲಿ ಒಟ್ಟು ಐವರ ಮೇಲೆ ನಿಗಾ ವಹಿಸಲಾಗಿದೆ. ಇದರಲ್ಲಿ ಇತ್ತೀಚೆಗೆ ಮೆಕ್ಕಾ-ಮದೀನಾದಿಂದ ಮರಳಿದ ಒಬ್ಬ ವ್ಯಕ್ತಿಯೂ ಸೇರಿದ್ದಾರೆ.

ಉಳಿದಂತೆ ದಾವಣಗೆರೆಯಲ್ಲಿ 24, ಬಾಗಲಕೋಟೆಯಲ್ಲಿ 16, ಬೆಳಗಾವಿಯಲ್ಲಿ 14, ವಿಜಯಪುರದಲ್ಲಿ 5, ದಕ್ಷಿಣ ಕನ್ನಡದಲ್ಲಿ 6, ಉಡುಪಿಯಲ್ಲಿ 9, ರಾಯಚೂರಲ್ಲಿ 5 ಮಂದಿಯ ಮೇಲೆ ನಿಗಾ ವಹಿಸಲಾಗಿದೆ. ಬಳ್ಳಾರಿ, ಕೊಪ್ಪಳ, ಚಿಕ್ಕಮಗಳೂರಿನಲ್ಲಿ ಇಬ್ಬರ ಮೇಲೆ ಮತ್ತು ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಒಬ್ಬರ ಮೇಲೆ ಜಿಲ್ಲಾಡಳಿತ ನಿಗಾ ವಹಿಸುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ