ರೈತರಿಂದ ತಪ್ಪದೇ ಹಾಲು ಖರೀದಿಗೆ ಕೆಎಂಎಫ್‌ ಸೂಚನೆ!

Published : Apr 01, 2020, 08:20 AM ISTUpdated : Apr 01, 2020, 09:25 AM IST
ರೈತರಿಂದ ತಪ್ಪದೇ ಹಾಲು ಖರೀದಿಗೆ ಕೆಎಂಎಫ್‌ ಸೂಚನೆ!

ಸಾರಾಂಶ

ರೈತರಿಂದ ತಪ್ಪದೇ ಹಾಲು ಖರೀದಿಗೆ ಕೆಎಂಎಫ್‌ ಸೂಚನೆ| ಕೊರೋನಾ ಬಿಕ್ಕಟ್ಟು: ಕೆಎಂಎಫ್‌ ಅಧ್ಯಕ್ಷ ಜಾರಕಿಹೊಳಿ ಸಭೆ

ಬೆಂಗಳೂರು(ಏ.01): ರಾಜ್ಯದ 14 ಸಹಕಾರಿ ಹಾಲು ಒಕ್ಕೂಟಗಳು ರೈತರಿಂದ ದಿನಕ್ಕೆ ಎರಡು ಬಾರಿ ತಪ್ಪದೇ ಗುಣಮಟ್ಟದ ಹಾಲು ಖರೀದಿ ಮಾಡಬೇಕೆಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌) ಸೂಚನೆ ನೀಡಿದೆ.

ಸೋಮವಾರ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೋವಿಡ್‌-19ರ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಸಭೆಯ ನಂತರ ಮಾತನಾಡಿದ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಪಶು ಆಹಾರಕ್ಕೆ ಫೆಬ್ರವರಿ ಮತ್ತು ಮಾಚ್‌ರ್‍ ತಿಂಗಳಲ್ಲಿ ಪ್ರತಿ ಟನ್‌ ಪಶು ಆಹಾರಕ್ಕೆ 500 ರು.ನಂತೆ ನೀಡಿದ ರಿಯಾಯಿತಿಯನ್ನು ಏಪ್ರಿಲ್‌ ತಿಂಗಳ ಅಂತ್ಯದವರೆಗೂ ವಿಸ್ತರಿಸಲು ನಿರ್ಧರಿಸಲಾಯಿತು. ಹಾಗೆಯೇ ಲಾಕ್‌ಡೌನ್‌ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅವರು ಕರ್ತವ್ಯ ನಿರ್ವಹಿಸುವ ಪ್ರತಿ ದಿನ ಒಂದು ದಿನದ ಹೆಚ್ಚುವರಿ ವೇತನ ನೀಡಲು ಅಥವಾ ಪರಿಹಾರ ರಜೆಯನ್ನು ಈ ವರ್ಷದ ಅಂತ್ಯದೊಳಗೆ ಪಡೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ರು. ದೇಣಿಗೆ ನೀಡುವುದಾಗಿ ಅವರು ತಿಳಿಸಿದರು.

ನಿತ್ಯ 8 ಲಕ್ಷ ಲೀಟರ್‌ ಹಾಲು ಮಾರಾಟವಾಗ್ತಿಲ್ಲ!

ಗುತ್ತಿಗೆ ನೌಕರರು, ಚಾಲಕರಿಗೆ ಪ್ರತಿದಿನ ಹೆಚ್ಚುವರಿ 500 ರು.

ಕೊರೋನಾ ಸೋಂಕು ಭೀತಿಯ ನಡುವೆಯೂ ಕೆಲಸ ಮಾಡುತ್ತಿರುವ ಕೆಎಂಎಫ್‌ ಗುತ್ತಿಗೆ ನೌಕರರು ಹಾಗೂ ಚಾಲಕರಿಗೆ ಪ್ರತಿ ದಿನ ಪ್ರೋತ್ಸಾಹಧನವಾಗಿ 500 ನೀಡಲಾಗುವುದು ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?
ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ