ಕ್ಯಾನ್ಸರ್‌ ರೋಗಿಗೂ ತಗುಲಿದ ಮಹಾಮಾರಿ ಕೊರೋನಾ..!

Kannadaprabha News   | Asianet News
Published : May 23, 2020, 10:56 AM IST
ಕ್ಯಾನ್ಸರ್‌ ರೋಗಿಗೂ ತಗುಲಿದ ಮಹಾಮಾರಿ ಕೊರೋನಾ..!

ಸಾರಾಂಶ

ರಾಮನಗರ ಮೂಲದ ಮಹಿಳೆ| ಬೆಂಗಳೂರಿನ  ಲಕ್ಕಸಂದ್ರದಲ್ಲಿ ಸಹೋದರಿ ಮನೆಯಲ್ಲಿ ವಾಸ| ಲಕ್ಕಸಂದ್ರ ವಾರ್ಡ್‌ನ ಲಾಲ್‌ ಜಿ ನಗರ ಸೀಲ್‌ಡೌನ್‌| ಮಹಿಳೆಯೊಂದಿಗೆ ಆಕೆಯ ಗಂಡ ಹೊರತು ಪಡಿಸಿ ಬೇರೆ ಯಾರೂ ಸಂಪರ್ಕದಲ್ಲಿ ಇರಲಿಲ್ಲ|

ಬೆಂಗಳೂರು(ಮೇ.23): ರಾಮನಗರದ ಮೂಲದ ಕ್ಯಾನ್ಸರ್‌ ಪೀಡಿತ ಮಹಿಳೆಗೆ (36 ವರ್ಷ) ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿಂದ ಮಹಿಳೆ ವಾಸ ಇರುವ ಲಕ್ಕಸಂದ್ರ ವಾರ್ಡ್‌ನ ಲಾಲ್‌ ಜಿ ನಗರವನ್ನು ಬಿಬಿಎಂಪಿ ಅಧಿಕಾರಿಗಳು ಸೀಲ್‌ಡೌನ್‌ ಮಾಡಿದ್ದಾರೆ.

ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಾಮನಗರ ಮೂಲದ ಮಹಿಳೆ ಬೆಂಗಳೂರಿನ ಎಚ್‌ಜಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಾಮನಗರದಿಂದ ಬೆಂಗಳೂರಿಗೆ ಚಿಕಿತ್ಸೆಗೆ ಬರಲು ತೊಂದರೆ ಉಂಟಾಗಲಿದೆ ಎಂಬ ಕಾರಣಕ್ಕೆ ನಗರದ ಲಕ್ಕಸಂದ್ರದಲ್ಲಿ ತನ್ನ ಸಹೋದರಿ ಮನೆಯಲ್ಲಿ ವಾಸವಿದ್ದರು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಹೋದರಿ ಹಾಗೂ ಕುಟುಂಬ ಸದಸ್ಯರು ತಮ್ಮ ಸ್ವಂತ ಊರುಗಳಿಗೆ ತೆರಳಿದ್ದರು. ಕಳೆದೊಂದು ತಿಂಗಳಿನಿಂದ ಕ್ಯಾನ್ಸರ್‌ ಪೀಡಿತ ಮಹಿಳೆ ಹಾಗೂ ಆಕೆಯ ಪತಿ ಮಾತ್ರ ಲಕ್ಕಸಂದ್ರದಲ್ಲಿ ಇದ್ದರು.

ಕಳ್ಳ ದಾರೀಲಿ ರಾಜ್ಯಕ್ಕೆ ಬರುತ್ತಿರುವ ಜನರು: ಕೊರೋನಾ ಸೋಂಕು ಹರಡುವ ಆತಂಕ..!

ಇತ್ತೀಚೆಗೆ ಮಹಿಳೆಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಪರೀಕ್ಷೆ ಮಾಡಲಾಗಿದೆ. ಆಗ ಕೊರೋನಾ ಸೋಂಕು ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮಹಿಳೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬಿಬಿಎಂಪಿ ದಕ್ಷಿಣ ವಲಯದ ಆರೋಗ್ಯಾಧಿಕಾರಿ ಡಾ. ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.

ಮಹಿಳೆಯೊಂದಿಗೆ ಆಕೆಯ ಗಂಡ ಹೊರತು ಪಡಿಸಿ ಬೇರೆ ಯಾರೂ ಸಂಪರ್ಕದಲ್ಲಿ ಇರಲಿಲ್ಲ. ಹೀಗಾಗಿ ಆಕೆಯ ಪತಿಯನ್ನು ಕ್ವಾರಂಟೈನ್‌ ಮಾಡಲಾಗಿದೆ. ಮಹಿಳೆ ವಾಸ ಇರುವ ಮನೆಯ ಸುತ್ತ ಮುತ್ತ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಲಾಲ್‌ಜಿ ನಗರ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ ಎಂದು ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ