ಕರ್ನಾಟಕದಲ್ಲಿ ಅರ್ಧ ಬಂದ್..ಬಂದ್..: ಹರಿದಾಡುತ್ತಿರುವ Fake ಮಾರ್ಗಸೂಚಿ

Published : Apr 19, 2021, 07:05 PM ISTUpdated : Apr 19, 2021, 07:12 PM IST
ಕರ್ನಾಟಕದಲ್ಲಿ ಅರ್ಧ ಬಂದ್..ಬಂದ್..: ಹರಿದಾಡುತ್ತಿರುವ Fake ಮಾರ್ಗಸೂಚಿ

ಸಾರಾಂಶ

ಕೊರೋನಾ ಸೋಂಕು ತೀವ್ರ ಏರಿಕೆ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ದೈನಂದಿನ ಕಾರ್ಯಚಟುವಟಿಕೆಗಳಿಗೆ ತೊಂದರೆಯಾಗದಂತೆ ಈ ಮಾರ್ಗಸೂಚಿಯನ್ನು ರಿಲೀಸ್ ಮಾಡಲಾಗಿದೆ. ಇದರ ಸತ್ಯಾಸತ್ಯತೆ ಇಲ್ಲಿದೆ

ಬೆಂಗಳೂರು, (ಏ.19): ಕರ್ನಾಟಕದಲ್ಲಿ ಕೊರೋನಾ ವೈರಸ್​ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದೆ. ಇದರಿಂದ ಜನರು ಆತಂಕದಲ್ಲಿದ್ದರೆ, ಇನ್ನೂ ಕೆಲ ಕಿಡಿಗೇಡಿಗಳು ರಾಜ್ಯ ಸರ್ಕಾರದ ಹೆಸರಿನಲ್ಲಿ ಇಲ್ಲದ್ದನ್ನು ಹರಿಬಿಟ್ಟು ಸಾರ್ವಜನಿಕರಲ್ಲಿ ಭಯಭೀತಿಯನ್ನು ಸೃಷ್ಟಿಸುತ್ತಿದ್ದಾರೆ.

ಹೌದು...ಇಂದು (ಏ.19) ರಾಜ್ಯ ಸರ್ಕಾರ ಲೆಟರ್ ಹೆಡ್‌ನಲ್ಲಿ ಹರಿದಾಡುತ್ತಿರುವ ಮಾರ್ಗಸೂಚಿ ಪ್ರತಿ ನಕಲಿಯಾಗಿದೆ. ಆದ್ದರಿಂದ ಯಾರು ಆತಂಕಪಡುವ ಅಗತ್ಯತೆ ಇಲ್ಲ.

ಮೇ 3 ರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಅನಗತ್ಯವಾಗಿ ಯಾರೂ ಓಡಾಡುವಂತಿಲ್ಲ.   ದೈನಂದಿನ ಕಾರ್ಯಚಟುವಟಿಕೆಗಳಿಗೆ ತೊಂದರೆಯಾಗದಂತೆ ಇನ್ನುಳಿದವುಗಳಿಗೆ ನಿರ್ಬಂಧಿಸಿದೆ. ಹೀಗೆ ಸರ್ಕಾರದ ನಕಲಿ ಮಾರ್ಗಸೂಚಿ ಹರಿದಾಡುತ್ತಿದೆ.

ಇನ್ನು ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಸ್ಪಷ್ಟನೆಕೊಟ್ಟಿದ್ದು,  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾರ್ಗಸೂಚಿ ನಕಲಿಯಾಗಿದ್ದು ಸರ್ಕಾರ ಆ ರೀತಿಯ ಯಾವುದೇ ಮಾರ್ಗಸೂಚಿ ಹೊರಡಿಸಿರುವುದಿಲ್ಲ ಎಂದರು.

ವಿಪಕ್ಷ ನಾಯಕರ ರಾಜ್ಯಪಾಲರು ಹಾಗು ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಇದ್ದು, ಸಭೆಯ ನಂತರ ಹೊಸ ಮಾರ್ಗಸೂಚಿ ಅಥವ ಹೊಸ ನಿಯಮಾವಳಿಗಳನ್ನು ಹೊರಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ತೀರ್ಮಾನಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಇನ್ನು ಈ ಸುಳ್ಳು ಗೈಡ್ ಲೈನ್ಸ್ ನಲ್ಲಿ ಏನೇನು ಇತ್ತು ಎನ್ನುವುದು ಈ ಕೆಳಗಿನಂತಿದೆ ನೋಡಿ..

ರಾಜ್ಯಾದ್ಯಂತ ಚಿತ್ರಮಂದಿರಗಳು ಬಂದ್
ಶಾಲಾ-ಕಾಲೇಜುಗಳು ಬಂದ್
ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧ
ಹೋಟೆಲ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ
ಬಾರ್ ಮತ್ತು ರೆಸ್ಟೋರೆಂಟ್ ಬಂದ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್