ಆರಕ್ಷಕರಿಗೆ ಬೆಂಗಳೂರು ಜನತೆಯ ಸಲಾಂ, ಹೂವಿನ ಸ್ವಾಗತ!

Published : Apr 06, 2020, 03:17 PM ISTUpdated : Apr 06, 2020, 03:19 PM IST
ಆರಕ್ಷಕರಿಗೆ ಬೆಂಗಳೂರು ಜನತೆಯ ಸಲಾಂ, ಹೂವಿನ ಸ್ವಾಗತ!

ಸಾರಾಂಶ

ಹಗಲಿರುಳೆಂಬಂತೆ ಜನರ ರಕ್ಷಣೆ ಮಾಡುತ್ತಿರುವ ಪೊಲೀಸರು| ಕೊರೋನಾ ಸಮರ ಗೆಲ್ಲಲು ಯೋಧರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಆರಕ್ಷಕರು| ರಕ್ಷಣೆಗೆ ನಿಂತ ಆರಕ್ಷಕರಿಗೆ ಹೀಗೊಂದು ಸ್ವಾಗತ

ಬೆಂಗಳೂರು(ಏ.06): ದೇಶದಾದ್ಯಂತ ಇಪ್ಪತ್ತೊಂದು ದಿನಗಳ ಲಾಕ್‌ಡೌನ್ ಹೇರಲಾಗಿದೆ. ಹೀಗಿರುವಾಗ ಕೊರೋನಾ ತಡೆಯುವ ನಿಟ್ಟಿನಲ್ಲಿ ಜನರನ್ನು ಹೊರ ಬಾರದಂತೆ ತಡೆಯುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆಯ ಸಿಬ್ಬಂದಿ ಅವಿರತ ಶ್ರಮ ಪ್ರಶಂಸೆಗೆ ಪಾತ್ರವಾದದ್ದು. ಹೀಗಿರುವಾಗ ತಮ್ಮ ಆರಕ್ಷಕರಗೆ ಬೆಂಗಳೂರಿನ ಜನತೆ ಹೂವಿನ ಸುರಿಮಳೆಗೈದು ಧನ್ಯವಾದ ಸಲ್ಲಿಸಿದ್ದಾರೆ. 

ಪ್ರಾಣವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ: ಆಶಾ ಕಾರ್ಯಕರ್ತೆಯರಿಗೆ ಹೂಮಳೆ ಸ್ವಾಗತ

ಹೌದು ಭಾರತವಿಡೀ ಒಂದಾಗಿ ಕೊರೋನಾ ಸಮರವನ್ನು ಎದುರಿಸುತ್ತಿದೆ. ಹೀಗಿರುವಾಗ ಕೊರೋನಾ ವಿರುದ್ಧದ ಈ ಯುದ್ಧದಲ್ಲಿ ಪೊಲೀಸ್ ಸಿಬ್ಬಂದಿ, ವೈದ್ಯರು, ನರ್ಸ್‌ಗಳು ಹಾಗೂ ಇತರ ಅನೇಕರು ಹಗಲಿರುಳೆಂಬಂತೆ ಯೋಧರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ಇಂತಹ ಸಂಕಷ್ಟದ ಸಮಯದಲ್ಲೂ ತಮ್ಮ ರಕ್ಷಣೆಗೆ ನಿಂತ ಸಿಬ್ಬಂದಿಗೆ ಜನರು ವಿಭಿನ್ನವಾಗಿ ಧನ್ಯವಾದ ಹೇಳುತ್ತಿದ್ದಾರೆ.

ಸದ್ಯ ಬೆಂಗಳೂರು ನಗರ ಪೊಲೀಸ್ ಟ್ವಿಟರ್ ಖಾತೆಯಲ್ಲಿ ಈ ಸಂಬಂಧ ವಿಡಿಯೋ ಒಂದನ್ನು ಶೇರ್ ಮಾಡಲಾಗಿದ್ದು, ನಾವು ಸೇವೆ ಸಲ್ಲಿಸುತ್ತೇವೆ, ನಾವು ಭದ್ರತೆ ಒದಗಿಸುತ್ತೇವೆ. ಈ ಮೂಲಕ ನಮ್ಮ ಕರ್ತವ್ಯ ನಿಭಾಯಿಸುತ್ತೇವೆ. ನಿಮ್ಮ ಇಂತಹ ಆದರತೆಗೆ ಧನ್ಯವಾದಗಳು ಎಂದು ಬರೆದಿದ್ದಾರೆ.. ಈ ವಿಡಿಯೋದಲ್ಲಿ ವಂದೇ ಮಾತರಂ ಗೀತೆಯನ್ನೂ ಸೇರಿಸಲಾಗಿದೆ. 

ಟ್ವಿಟರ್‌ನಲ್ಲಿ ಮತ್ತೊಂದು ವಿಡಿಯೋ ಕೂಡಾ ವ್ಯಾಪಕವಾಗಿ ಶೇರ್ ಆಗುತ್ತಿದ್ದು, ಇದರಲ್ಲಿ ಮಹಿಳೆಯರಿಬ್ಬರು ಪೊಲೀಸರಿಗೆ ಆರತಿ ಎತ್ತಿ ತಿಲಕವಿಡುವ ದೃಶ್ಯಗಳಿವೆ. ಖಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಕ್ರಿಯಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌