ಕೊರೋನಾ ಸೋಂಕಿತ ತಂದೆಯ ಆಸ್ಪತ್ರೆಗೆ ದಾಖಲಿಸಲು ಮಗನ ಪರದಾಟ

Published : Jul 29, 2020, 07:44 AM ISTUpdated : Jul 29, 2020, 07:47 AM IST
ಕೊರೋನಾ ಸೋಂಕಿತ ತಂದೆಯ ಆಸ್ಪತ್ರೆಗೆ ದಾಖಲಿಸಲು ಮಗನ ಪರದಾಟ

ಸಾರಾಂಶ

58 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು| ಬೆಡ್‌ ಇಲ್ಲವೆಂದು ಆಸ್ಪತ್ರೆಗಳ ಕಳ್ಳಾಟ| ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆತಂದಾಗ ಅಲ್ಲಿ ಆಂಟಿಜನ್‌ ಟೆಸ್ಟ್‌ ಮಾಡಿದಾಗ ಕೊರೋನಾ ಪಾಸಿಟಿವ್‌ ಇರುವುದು ದೃಢ| 

ಬೆಂಗಳೂರು(ಜು.29): ಕೊರೋನಾ ಸೋಂಕಿತ ಹಿರಿಯ ವ್ಯಕ್ತಿಯೊಬ್ಬರು ಚಿಕಿತ್ಸೆ ಪಡೆಯಲು ಹತ್ತಾರು ಆಸ್ಪತ್ರೆಗಳಿಗೆ ಅಲೆದಾಡಿದರೂ ಹಾಸಿಗೆ ಸಿಗದೇ ಪರದಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

58 ವರ್ಷದ ಹಿರಿಯರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಮವಾರ ತಡರಾತ್ರಿ ಹತ್ತಾರು ಆಸ್ಪತ್ರೆ ಅಲೆದಾಡಿದ ನಂತರ ಮಂಗಳವಾರ ಮುಂಜಾನೆ ಬೌರಿಂಗ್‌ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸೋಂಕಿತರ ಪತ್ತೆಗೆ ವಾಸನೆ ಗ್ರಹಿಕೆ ಟೆಸ್ಟ್‌!

ಸೋಮವಾರ ತಡರಾತ್ರಿ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ತಕ್ಷಣ ನಮ್ಮ ತಂದೆಯನ್ನು ಪೀಪಲ್‌ ಟ್ರೀ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಅಲ್ಲಿ ಹಾಸಿಗೆ ಇಲ್ಲ ಎಂದಾಗ ನಂತರ ಪ್ರಕ್ರಿಯಾ ಆಸ್ಪತ್ರೆ, ಸಪ್ತಗಿರಿ ಹೀಗೆ ಹತ್ತಾರು ಆಸ್ಪತ್ರೆಗೆ ಕರೆದೊಯ್ದರೂ ಹಾಸಿಗೆ ಇಲ್ಲ, ವೆಂಟಿಲೇಟರ್‌ ಇಲ್ಲ ಎಂದೆಲ್ಲಾ ಕಾರಣ ನೀಡಿ ಚಿಕಿತ್ಸೆ ನಿರಾಕರಿಸಿದರು ಎಂದು ಅವರ ಸೋಂಕಿತರ ಪುತ್ರ ಕಿಡಿಕಾರಿದರು.

ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆತಂದಾಗ ಅಲ್ಲಿ ಆಂಟಿಜನ್‌ ಟೆಸ್ಟ್‌ ಮಾಡಿದಾಗ ಕೊರೋನಾ ಪಾಸಿಟಿವ್‌ ಇರುವುದು ದೃಢಪಟ್ಟಿತು. ಆದರೆ ನಮ್ಮಲ್ಲಿ ವೆಂಟಿಲೇಟರ್‌ ಇಲ್ಲ. ತೀವ್ರ ಉಸಿರಾಟ ಸಮಸ್ಯೆ ಇರುವುದರಿಂದ ವೆಂಟಿಲೇಟರ್‌ ಬೇಕೇ ಬೇಕು. ಹೀಗಾಗಿ ವೆಂಟಿಲೇಟರ್‌ ಇರುವುದ ಆಸ್ಪತ್ರೆಗೆ ಕರೆದೊಯ್ಯಿರಿ ಎಂದರು. ಈ ವೇಳೆ ಕೆ.ಸಿ.ಜನರಲ್‌ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ಕೋವಿಡ್‌ಗೆ ನಿಗದಿ ಮಾಡಿರುವ 100ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಕರೆ ಮಾಡಿದೆ. ಒಂದೇ ಒಂದು ಆಸ್ಪತ್ರೆಯಿಂದಲೂ ಪ್ರತಿಕ್ರಿಯೆ ಬರಲಿಲ್ಲ. ಮುಂಜಾನೆ 5.30ರ ಸುಮಾರಿಗೆ ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ದಾಗ ಚಿಕಿತ್ಸೆ ನೀಡಲು ಮುಂದಾದರು. ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು 24 ತಾಸು ಏನನ್ನೂ ಹೇಳಲಾಗದು ಎಂದು ಹೇಳಿದ್ದಾರೆ ಎಂದು ನೋವಿನಿಂದ ನುಡಿದರು.

ಸರ್ಕಾರ ಕೋವಿಡ್‌ ಸೋಂಕಿತರಿಗೆ ಎಲ್ಲ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳುತ್ತದೆ. ಇಡೀ ರಾತ್ರಿ ಅಲೆದಾಡಿದರೂ ತಂದೆಗೆ ಆಸ್ಪತ್ರೆಗಳಲ್ಲಿ ಒಂದೇ ಒಂದು ಹಾಸಿಗೆ ಸಿಗಲಿಲ್ಲ. ನಾವು ಯಾರನ್ನು ದೂರಬೇಕು. ಏನಾದರೂ ಪ್ರಾಣಕ್ಕೆ ಅಪಾಯವಾದರೆ ಹೊಣೆ ಯಾರು ಹೊರುತ್ತಾರೆ ಎಂದು ಪುತ್ರ ಆಕ್ರೋಶ ವ್ಯಕ್ತಪಡಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾಲಿಗೆ ಚಿಪ್‌ ಅಳವಡಿಸಿ ಪೊಲೀಸ್‌ ಪೇದೆ ಹುದ್ದೆಗಳ ದೈಹಿಕ ಪರೀಕ್ಷೆಗೆ ಸಿದ್ಧತೆ, ಓಟ ಮುಗಿಸ್ತಿದ್ದಂತೆ ಮೊಬೈಲ್‌ಗೆ ಬರಲಿದೆ ರಿಸಲ್ಟ್‌
14 ಹಿಂದಿಯೇತರ ರಾಜ್ಯಗಳಿಂದ ಹೋರಾಟಕ್ಕಾಗಿ ಒಕ್ಕೂಟ, ಕರ್ನಾಟಕದಿಂದ ಕರವೇ ಭಾಗಿ