ಮಂಗಳೂರಲ್ಲಿ ಕೊರೋನಾ ಕೇಸ್ ಪತ್ತೆ: ಕರುನಾಡಲ್ಲೂ ಏರಿಕೆಯಾಗ್ತಿದೆ ಸೊಂಕಿತರ ಸಂಖ್ಯೆ

Published : Mar 22, 2020, 06:30 PM ISTUpdated : Mar 22, 2020, 09:16 PM IST
ಮಂಗಳೂರಲ್ಲಿ ಕೊರೋನಾ ಕೇಸ್ ಪತ್ತೆ: ಕರುನಾಡಲ್ಲೂ ಏರಿಕೆಯಾಗ್ತಿದೆ ಸೊಂಕಿತರ ಸಂಖ್ಯೆ

ಸಾರಾಂಶ

ನಿನ್ನೆ ಅಂದ್ರೆ ಶನಿವಾರ ಒಂದೇ ದಿನ 5 ಕೊರೋನಾ ವೈರಸ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದುವು. ಇಂದು (ಭಾನುವಾರ) ಸಹ ಒಂದು ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಅದು ಮಂಗಳೂರಿನಲ್ಲಿ.

ಮಂಗಳೂರು, (ಮಾ.22): ಮಹಾಮಾರಿ ಕೊರೋನಾ ವೈರಸ್ ಇದೀಗ ದಕ್ಷಿಣ ಕನ್ನಡಕ್ಕೂ ವ್ಯಾಪಿಸಿದೆ. ಮಾ.19 ರಂದು ದುಬೈನಿಂದ ಮಂಗಳೂರಿಗೆ ಬಂದಿದ್ದ ಯುವಕನಿಗೆ ಕೊರೋನಾ ಇರುವುದು ದೃಢವಾಗಿದೆ.

"

ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದೂಡಿಕೆ

ಭಟ್ಕಳ ಮೂಲದ 22 ವರ್ಷದ ಯುವಕನಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಸದ್ಯ ಆತನನ್ನ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸ್ಪಷ್ಟಪಡಿಸಿದ್ದಾರೆ.

ಮಾ.19 ರಂದು ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದು. ಸ್ಕ್ರೀನಿಂಗ್ ವೇಳೆ ಕೊರೋನಾ ಸೋಂಕು ಲಕ್ಷಣಗಳು ಕಂಡುಬಂದಿವೆ. ಕೂಡಲೇ ಯುವಕನನ್ನು ಏರ್ ಪೋರ್ಟ್ ನಿಂದ ಅಂಬ್ಯುಲೆನ್ಸ್ ಮೂಲಕ ವೆನ್ಲಾಕ್ ಸಾಗಿಸಲಾಗಿತ್ತು. 

ಕರ್ನಾಟಕದಲ್ಲಿ ಶನಿವಾರ ಒಂದೇ ದಿನ 5 ಕೊರೋನಾ ಕೇಸ್: ಎಲ್ಲೆಲ್ಲಿ?

ಬಳಿಕ ಗಂಟಲಿನ ಮಾದರಿ ಪರೀಕ್ಷೆಗೆ ಕಳುಹಿಸಸಲಾಗಿತ್ತು. ಇದೀಗ ಪರೀಕ್ಷೆಯ ವರದಿ ಬಂದಿದ್ದು, ಯುವಕನಿಗೆ ಸೋಂಕು ತಗುಲಿರುವುದು ದೃಢವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂದು ಸಿಂಧನೂರು ಪಟ್ಟಣಕ್ಕೆ ಡಿಕೆಶಿ ಭೇಟಿ, ಬೃಹತ್ ಸಮಾರಂಭಕ್ಕೆ ಗಣ್ಯರ ದಂಡು, ಕಾರ್ಯಕ್ರಮಕ್ಕೆ ಬರುವ ಜನರಿಗೆ ಭರ್ಜರಿ ಭೋಜನ!
India's energy security strategy: ವಿದೇಶಿ ಹಿಡಿತ ತಪ್ಪಿಸುತ್ತಿದೆ ಭಾರತದ ಇಂಧನ ಭದ್ರತೆ