ಚೀನಾದಿಂದ ಬಂದವರಿಗೆ ಔಷಧ ಸಿಂಪಡಿಸುತ್ತೇವೆ: ಶ್ರೀರಾಮುಲು

Published : Feb 04, 2020, 08:00 AM IST
ಚೀನಾದಿಂದ ಬಂದವರಿಗೆ ಔಷಧ ಸಿಂಪಡಿಸುತ್ತೇವೆ: ಶ್ರೀರಾಮುಲು

ಸಾರಾಂಶ

ಚೀನಾದಿಂದ ಬಂದವರಿಗೆ ಔಷಧ ಸಿಂಪಡಿಸುತ್ತೇವೆ| ಕೊರೋನಾಗೆ ಆಯುರ್ವೇದದಲ್ಲಿ ಔಷಧವಿದೆ

ಮೈಸೂರು[ಫೆ.04]: ರಾಜ್ಯದಲ್ಲಿ ಕೊರೋನಾ ವೈರಸ್‌ ಕಂಡುಬಂದಲ್ಲಿ ಅದು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಈ ರೋಗಕ್ಕೆ ಆಯುರ್ವೇದದಲ್ಲಿ ಔಷಧವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ತಮ್ಮ ಪುತ್ರಿಯ ವಿವಾಹ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರನ್ನು ಆಹ್ವಾನಿಸಲು ಅರಮನೆಗೆ ಆಗಮಿಸಿದ್ದ ಅವರು ಸುದ್ದಿಗಾರೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ಈವರೆಗೂ ಕೊರೋನಾ ವೈರಸ್‌ ಪತ್ತೆಯಾಗಿಲ್ಲ. ವೈರಸ್‌ ಕಂಡುಬಂದರೆ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಚೀನಾದಿಂದ ಬರುವವರಿಗೆ ಔಷಧಿ ಸಿಂಪಡಿಸಿ ಬರಮಾಡಿಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಅವರು ಹೇಳಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ವಾರ್ಡ್‌ ತೆರೆಯಲಾಗಿದ್ದು, ಹತ್ತು ಹಾಸಿಗೆಯುಳ್ಳ ವಾರ್ಡ್‌ಗಳನ್ನು ಕೊರೋನಾ ಪೀಡಿತರಿಗೆ ಮೀಸಲಿಡಲಾಗಿದೆ ಎಂದರು.

ವಿದೇಶದಿಂದ ರಾಜ್ಯಕ್ಕೆ ಬಂದಿದ್ದ 44 ಮಂದಿ ಪ್ರವಾಸಿಗರ ರಕ್ತ ಪರೀಕ್ಷೆ ಮಾಡಲಾಗುತ್ತಿದ್ದು ಈ ಪೈಕಿ 29 ಮಂದಿಯ ರಕ್ತದಲ್ಲಿ ಕೊರೋನ ವೈರಸ್‌ ನೆಗೆಟಿವ್‌ ಎಂಬ ವರದಿ ಬಂದಿದೆ. ಉಳಿದವರ ರಕ್ತ ಪರೀಕ್ಷೆ ವರದಿ ಬರಬೇಕಷ್ಟೇ ಎಂದರು. ಒಂದು ವೇಳೆ ಕೊರೋನಾ ಕಂಡು ಬಂದಲ್ಲಿ ಔಷಧ ಹೊರ ದೇಶದಿಂದ ತರಿಸಲು ಸಿದ್ಧರಿದ್ದೇವೆ. ರೋಗಿಗಳ ಚಿಕಿತ್ಸಾ ವೆಚ್ಚ ಬರಿಸಲೂ ಸರ್ಕಾರ ಸಿದ್ಧವಿದೆ. ಈ ರೋಗಕ್ಕೆ ಆಯುರ್ವೇದದಲ್ಲಿ ಔಷಧವಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ