
ಬೆಂಗಳೂರು (ಸೆ.11): ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನಡುವಿನ ಪತ್ರ ಸಮರ ಕೊನೆಗೂ ತಣ್ಣಗಾಗಿದೆ. ಖಾದರ್ ಅವರು ಖುದ್ದು ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ ಪರಿಣಾಮ ಭಿನ್ನಾಭಿಪ್ರಾಯ ಶಮನಗೊಂಡಿದೆ.
ಬುಧವಾರ ಬೆಳಗ್ಗೆ ಹೊರಟ್ಟಿ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಯು.ಟಿ.ಖಾದರ್ ಅವರು 15 ನಿಮಿಷ ಕಾಲ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ತಮ್ಮ ಇಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಷ್ಟನೆ ನೀಡಿದರು.
ಇದನ್ನೂ ಓದಿ: ಬ್ಯಾಲಟ್ ಪೇಪರ್ ಅಕ್ರಮ ಈಗ ಸುಲಭವಲ್ಲ..: ಮಾಜಿ ಚುನಾವಣಾ ಆಯುಕ್ತರೊಂದಿಗೆ ಮುಖಾಮುಖಿ ಸಂದರ್ಶನ
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ನಾನು ವಿದೇಶ ಪ್ರವಾಸ ಕೈಗೊಂಡಿದ್ದೆ. ಈ ಸಂದರ್ಭದಲ್ಲಿ ಸ್ವಲ್ಪ ಕಮ್ಯುನಿಕೇಷನ್ ಗ್ಯಾಪ್ ಆಗಿದೆ. ಹೀಗಾಗಿ ನಾನು ಪತ್ರ ಬರೆದಿದ್ದೆ. ಈಗ ಖಾದರ್ ಅವರು ಎಲ್ಲವನ್ನೂ ನನ್ನ ಗಮನಕ್ಕೆ ತಂದಿದ್ದಾರೆ. ಇದೀಗ ಎಲ್ಲವೂ ಸರಿ ಹೋಗಿದೆ ಎಂದರು.
ಯು.ಟಿ.ಖಾದರ್ ಅವರು ಯಾವುದೇ ಕಾರ್ಯಕ್ರಮ ನಡೆಸಿದರೂ ನಮ್ಮ ಜತೆ ಚರ್ಚಿಸದೆ ಏಕಪಕ್ಷೀಯ ತೀರ್ಮಾನ ಕೈಗೊಳ್ಳುತ್ತಿದ್ದಾರೆ ಎಂದು ಹೊರಟ್ಟಿ ಅವರು ಯು.ಟಿ.ಖಾದರ್ ಅವರಿಗೆ ಮಂಗಳವಾರ ಪತ್ರ ಬರೆದು ಆಕ್ರೋಶ ಹೊರ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ