
ಬೆಂಗಳೂರು (ಆ.21) ಧರ್ಮಸ್ಥಳ ವಿರುದ್ಧ ಎಐ ವಿಡಿಯೋ ಸೃಷ್ಟಿಸಿ ಅಪಪ್ರಚಾರ ಮಾಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್ ಎಂಡಿ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಸಮೀರ್ ಬಂಧನಕ್ಕೆ ಧರ್ಮಸ್ಥಳದಿಂದ ಬೆಂಗಳೂರಿಗೆ ಆಗಮಿಸಿದ್ದ ಪೊಲೀಸರು ಸಮೀರ್ ಮನೆ ಹುಡುಕಾಡಿದ್ದರು. ಪೊಲೀಸರು ಬರುತ್ತಿದ್ದಂತೆ ಎಸ್ಕೇಪ್ ಆಗಿದ್ದ ಸಮೀರ್ ಎಂಡಿ ವಕೀಲರ ಮೂಲಕ ಮಂಗಳೂರು ಕೋರ್ಟ್ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಇದದೀಗ ಮಂಗಳೂರು ಕೋರ್ಟ್ ಇದೀಗ ಸಮೀರ್ ಎಂಡಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಸಮೀರ್ ಎಂಡಿಗೆ ಮಂಗಳೂರು ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಬಂಧನ ಭೀತಿಯಿಂದ ಸಮೀರ್ ಎಂಡಿ ಪಾರಾಗಿದ್ದಾರೆ. ಆದರೆ ಇದೇ ವೇಳೆ ಕೋರ್ಟ್, ಇನ್ನೆರಡು ದಿನದಲ್ಲಿ ಸಮೀರ್ ಎಂಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.
ಧರ್ಮಸ್ಥಳದಲ್ಲಿ ಸಾವಿರಾರು ಹೆಣ್ಣುಮಕ್ಕಳು, ಮಹಿಳೆಯರನ್ನು ಹತ್ಯೆ ಮಾಡಿ ಪ್ರಕರಣ ಮುಚ್ಚಿಹಾಕಿದ್ದಾರೆ. ಈ ಮಾಹಿತಿ ಕೇಳಿ ನಿಮ್ಮ ರಕ್ತ ಕುದಿಯುತ್ತಿಲ್ಲವೇ? ಇದರ ವಿರುದ್ಧ ಜನರು ದಂಗೆ ಏಳಬೇಕು, ಪ್ರತಿಭಟನೆ ಮಾಡಬೇಕು ಎಂದು ಗಂಭೀರ ಆರೋಪ ಮಾಡಿದ್ದರು.
ಧರ್ಮಸ್ಥಳ ಪ್ರಕರಣದಲ್ಲಿ ಸಮೀರ್ ಎಂಡಿ ಎಐ ಟೂಲ್ ಮೂಲಕ ನಕಲಿ ವಿಡಿಯೋ ಸೃಷ್ಟಿಸಿ ಪೋಸ್ಟ್ ಮಾಡಲಾಗಿತ್ತು. ಧರ್ಮಸ್ಥಳದಲ್ಲಿ ಸಾವಿರಾರು ಶವ ಹೂತಿಟ್ಟಿರುವುದಾಗಿ ಆರೋಪಿಸಿದ್ದ. ಮಹಿಳೆಯರು, ಮಕ್ಕಳ ಮೇಲೆ ಅತ್ಯಾ*ರ ಎಸಗಿ ಹತ್ಯೆ ಮಾಡಲಾಗಿತ್ತು. ಈ ಮೃತೇದಹಳನ್ನು ಧರ್ಮಸ್ಥಳ ಕಾಡಿನಲ್ಲಿ ಹೂತಿಡಲಾಗಿದೆ. ಯಾವುದೇ ಕಾನೂನು ಪ್ರಕ್ರಿಯೆ ಮಾಡದೇ ರಹಸ್ಯವಾಗಿ ಹೂತಿಡಲಾಗಿದೆ ಎಂದು ಸಮೀರ್ ಎಂಡಿ ಆರೋಪಿಸಿದ್ದ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ಈ ಗಂಭೀರ ಅಪರಾಧಗಳ ಬಗ್ಗೆ ಸಮಾಜ ಪ್ರತಿಭಟನೆ ನಡೆಸಬೇಕು, ನಿಮ್ಮ ರಕ್ತ ಕುದಿಯುತ್ತಿಲ್ಲವೇ ಎಂದು ಸಮೀರ್ ಎಂಡಿ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದ. ಧರ್ಮಸ್ಥಳ ವಿರುದ್ಧ ಎಐ ವಿಡಿಯೋ ಸೃಷ್ಟಿಸಿ ಅಪಪ್ರಚಾರ ಮಾಡುತ್ತಿರುವ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು.
ಧರ್ಮಸ್ಥಳ ಪ್ರಕರಣದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಬ್ರಹ್ಮಾವರ ಪೊಲೀಸರು ಬಂಧಸಿದ್ದಾರೆ. ಬಿಜೆಪಿ ಹಾಗೂ ಆರ್ಎಸ್ಎಸ್ ನಾಯಕ ಬಿಲ್ ಸಂತೋಷ್ ವಿರುದ್ದ ಮಾನಹಾನಿಕಾರ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ ಆಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ