ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಗೆ ಕೋರ್ಟ್ ಗ್ರೀನ್ ಸಿಗ್ನಲ್!

Published : Jun 05, 2024, 03:57 PM ISTUpdated : Jun 05, 2024, 04:09 PM IST
ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಗೆ ಕೋರ್ಟ್ ಗ್ರೀನ್ ಸಿಗ್ನಲ್!

ಸಾರಾಂಶ

ಹಾಸನ ಮಾಜಿ ಸಂಸದ, ಪೆನ್‌ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಗೆ ಕೋರ್ಟ್ ಒಪ್ಪಿಗೆ ನೀಡಿದೆ.

ಬೆಂಗಳೂರು (ಜೂ.5): ಹಾಸನ ಮಾಜಿ ಸಂಸದ, ಪೆನ್‌ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಗೆ ಕೋರ್ಟ್ ಒಪ್ಪಿಗೆ ನೀಡಿದೆ. ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣಗೆ ಇಂದು ಪುರುಷತ್ವ ಪರೀಕ್ಷೆ ನಡೆಯಲಿದೆ. ಪ್ರಜ್ವಲ್ ಪುರುಷತ್ವ ಪರೀಕ್ಷೆಗೆ ಮಂಡಗಳವಾರ ಕೋರ್ಟ್ ನಲ್ಲಿ  ಎಸ್ ಐ ಟಿ ತಂಡ ಪರ್ಮಿಷನ್ ಪಡೆದುಕೊಂಡಿದೆ.

ಹಾಸನದಲ್ಲಿ ಪೆನ್ ಡ್ರೈವ್ ಕಮಾಲ್, ಪ್ರಜ್ವಲ್‌ಗೆ ಸೋಲು, 2 ದಶಕಗಳ ನಂತರ ಕಾಂಗ್ರೆಸ್‌ಗೆ ಭರ್ಜರಿ ಗೆಲವು!

ಜೂನ್‌ 6 ರಂದು ಪ್ರಜ್ವಲ್ ಕಸ್ಟಡಿ ಅಂತ್ಯ ಹಿನ್ನೆಲೆ ಇಂದು ಪುರುಷತ್ವ ಪರೀಕ್ಷೆ ನಡೆಸಲು ಎಸ್ ಐ ಟಿ ನಿರ್ಧಾರ ಮಾಡಿದೆ. ಕಾನೂನಿನ ಪ್ರಕಾರ ಅತ್ಯಾಚಾರ ಆರೋಪಿಗಳಿಗೆ ಪುರುಷತ್ವ ಪರೀಕ್ಷೆ ಮಾಡಿಸಲಾಗುತ್ತದೆ. ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ ಗೆ ಪುರುಷತ್ವ ಪರೀಕ್ಷೆ ನಡೆಯಲಿದೆ.  

ತನಿಖೆಗೆ ಪ್ರಜ್ವಲ್ ಸ್ಪಂದಿಸದ ಹಿನ್ನೆಲೆಯಲ್ಲಿ ಹಾಸನ ಹಾಗೂ ಬಸವನಗುಡಿಯ ಮನೆಗೆ ಕರೆದೊಯ್ದು ಎಸ್‌ಐಟಿ ಸ್ಪಾಟ್ ಮಹಜರ್ ನಡೆಸಬೇಕು. ಹೀಗಾಗಿ ನಾಳೆ ಮತ್ತೆ ಕಸ್ಟಡಿಗೆ ಪಡೆಯಲು ಎಸ್ ಐ ಟಿ ನಿರ್ಧಾರ ಮಾಡಿದೆ.

ಪ್ರದೀಪ್‌ ಈಶ್ವರ್ ಕೆಲವೇ ಕ್ಷಣಗಳಲ್ಲಿ ರಾಜೀನಾಮೆ, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್!

ಎಸ್‌ಐಟಿ ಅಧಿಕಾರಿಗಳ ಮೂಲಕ ಸೋಲಿನ ಸುದ್ದಿ ತಿಳಿದ ಪ್ರಜ್ವಲ್‌
ತಾವು ಲೋಕಸಭಾ ಚುನಾವಣೆಯಲ್ಲಿ ಪರಾಜಿತರಾದ ಸುದ್ದಿಯನ್ನು ವಿಶೇಷ ತನಿಖಾ ದಳದ ಅಧಿಕಾರಿಗಳಿಂದ ಮಾಹಿತಿ ತಿಳಿದು ಹಾಸನ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಂಗಳವಾರ ನಿರಾಸೆಗೊಂಡಿದ್ದಾರೆ. ಚುನಾವಣಾ ಫಲಿತಾಂಶ ತಿಳಿಯಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಕೋರಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ಫಲಿತಾಂಶದ ಕುರಿತು ಅವರಿಗೆ ನಿರಂತರವಾಗಿ ಅಧಿಕಾರಿಗಳು ಮಾಹಿತಿ ಒದಗಿಸಿದ್ದರು. ಮತ ಎಣಿಕೆ ಶುರುವಾದ ಆರಂಭದಲ್ಲಿ ಸಮಾಧಾನದಿಂದಲೇ ಇದ್ದ ಪ್ರಜ್ವಲ್ ಅವರಿಗೆ ನಾಲ್ಕೈದು ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಗೆಲುವಿನ ಅಂತರ ಏರಿಕೆಯಾಗುತ್ತಿದ್ದಂತೆ ನಿರಾಸೆಗೊಂಡಿದ್ದಾರೆ. ಅಂತಿಮವಾಗಿ ಸೋಲುಂಡ ವಿಚಾರ ತಿಳಿದು ಪ್ರಜ್ವಲ್ ಅವರ ಮುಖವೂ ಕಳಹೀನವಾಯಿತು ಎಂದು ಮೂಲಗಳು ಹೇಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ