
ಬೆಂಗಳೂರು (ಆ.19): ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ ಆರೋಪ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತನಿಖೆಗೆ ಆದೇಶಿಸಿದೆ.
ಬುಧವಾರ ವಿಚಾರಣೆ ನಡೆಸಿದ ನ್ಯಾಯಾಲಯವು ಕೊಡಿಗೆಹಳ್ಳಿ ಪೊಲೀಸರಿಗೆ ತನಿಖೆಗೆ ನಡೆಸುವಂತೆ ಸೂಚಿಸಿದ್ದು, ಸೆ.13ರೊಳಗೆ ತನಿಖಾ ವರದಿ ಸಲ್ಲಿಸುವಂತೆ ತಿಳಿಸಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ; ಸಮಾಧಿಗೆ ನಮನ ಸಲ್ಲಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್!
ಕಳೆದ ವರ್ಷ ಅವರು ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ ರವಾನೆ ಮಾಡಿದ್ದರು ಎನ್ನಲಾಗಿತ್ತು. ಈ ಸಂಬಂಧ ಗೋವಿಂದರಾಮ್ ಎಂಬುವವರು ಖಾಸಗಿ ದೂರು ನೀಡಿದ್ದರು. ದೂರಿನ ವಿಚಾರಣೆ ಕೈಗೊಂಡ ನ್ಯಾಯಾಲಯವು ತನಿಖೆ ನಡೆಸುವಂತೆ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ