
ದೊಡ್ಡಬಳ್ಳಾಪುರ(ನ.2): ಬಳ್ಳಾರಿ ಲೋಕಸಭೆ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಮನೆಯಲ್ಲಿನ ವಸ್ತುಗಳ ಜಪ್ತಿಗೆ ದೊಡ್ಡಬಳ್ಳಾಪುರ ಕೋರ್ಟ್ ಆದೇಶ ಹೊರಡಿಸಿದೆ.
ಅಪಘಾತ ಪ್ರಕರಣವೊಂದರಲ್ಲಿ ಕೋರ್ಟ್ ಗೆ ಹಾಜರಾಗದೆ ದಂಡವನ್ನು ಕಟ್ಟದ ಹಿನ್ನೆಲೆಯಲ್ಲಿ ಉಗ್ರಪ್ಪ ಮನೆಯಲ್ಲಿನ ಚರಾಸ್ತಿ ಮುಟ್ಟುಗೋಲಿಗೆ ನ್ಯಾಯಲಯ ಆದೇಶ ನೀಡಿದೆ.
ದೊಡ್ಡಬಳ್ಳಾಪುರ ನಗರದ ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಈ ಆದೇಶ ಹೊರಡಿಸಿದ್ದು, ನ್ಯಾಯಮೂರ್ತಿ ಶುಕ್ಲಾಕ್ಷ ಫಾಲನ್ ರಿಂದ ಉಗ್ರಪ್ಪ ಚರಾಸ್ತಿ ಮುಟ್ಟುಗೋಲಿಗೆ ಆದೇಶ ನೀಡಿದ್ದಾರೆ.
2010 ರಲ್ಲಿ ವಿ.ಎಸ್.ಉಗ್ರಪ್ಪ ಅವರ ಕ್ವಾಲಿಸ್ ಕಾರು ಬಾಲಾಜಿ ಎಂಬುವರ ದ್ವೀಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಈ ಹಿನ್ನೆಲೆಯಲ್ಲಿ ಕಾರಿಗೆ ಇನ್ಸೂರೆನ್ಸ್ ಇಲ್ಲದ ಕಾರಣ ಪರಿಹಾರಕ್ಕಾಗಿ ಗಾಯಾಳು ಬಾಲಾಜಿ ಕೋರ್ಟ್ ಮೊರೆಹೋಗಿದ್ದರು.
ಆದರೆ 2012 ರಿಂದ ಹಲವು ಬಾರಿ ನೋಟಿಸ್ ನೀಡಿದರೂ, ಉಗ್ರಪ್ಪ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಳೆದ ಅ. 31 ರಂದು 94,925 ರೂ. ದಂಡದ ಹಣಕ್ಕಾಗಿ ಚರಾಸ್ತಿ ಮುಟ್ಟುಗೋಲಿಗೆ ನ್ಯಾಯಲಯ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ