ಡಿನೋಟಿಫಿಕೇಶನ್‌ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗದ ಎಚ್‌ಡಿಕೆಗೆ ಕೋರ್ಟ್‌ ಸಮನ್ಸ್‌

Published : Feb 17, 2023, 10:26 AM IST
ಡಿನೋಟಿಫಿಕೇಶನ್‌ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗದ ಎಚ್‌ಡಿಕೆಗೆ ಕೋರ್ಟ್‌ ಸಮನ್ಸ್‌

ಸಾರಾಂಶ

ಹಲವು ಬಾರಿ ಸಮನ್ಸ್‌ ನೀಡಿದರೂ ಹಾಜರಾಗದಿರುವುದಕ್ಕೆ ಬೇಸರ ವ್ಯಕ್ತಪಡಿಸಿ ಮುಂದಿನ ವಿಚಾರಣೆ ಹಾಜರಾಗಬೇಕು ಎಂದು ತಿಳಿಸಿದ ನ್ಯಾಯಾಲಯ. 

ಬೆಂಗಳೂರು(ಫೆ.17):  ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಪ್ಪದೇ ಮಾ.21ರಂದು ಹಾಜರಾಗಬೇಕು ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಸೂಚನೆ ನೀಡಿದೆ.

ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗಲು ವಿನಾಯಿತಿ ಕೋರಿದ್ದರು. ಇದಕ್ಕೆ ನ್ಯಾಯಾಲಯವು ಅಸಮಾಧಾನ ವ್ಯಕ್ತಪಡಿಸಿ ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ಹೇಳಿ ಮಾ.21ಕ್ಕೆ ವಿಚಾರಣೆ ಮುಂದೂಡಿದೆ.

ಹಳ್ಳಿಗಳಿಗೆ ಹೋದರೆ ಡಬಲ್‌ ಎಂಜಿನ್‌ ವೈಫಲ್ಯ ತಿಳಿಯುತ್ತೆ: ಎಚ್‌ಡಿಕೆ

ಚಾಮರಾಜನಗರದ ಎಂ.ಎಸ್‌.ಮಹಾದೇವಸ್ವಾಮಿ ಅವರು ದೂರು ದಾಖಲಿಸಿದ್ದರು. ಈ ಮೊದಲು ಲೋಕಾಯುಕ್ತ ಪೊಲೀಸರು ಪ್ರಕರಣದಲ್ಲಿ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಆದರೆ, ಜನಪ್ರತಿನಿಧಿಗಳ ನ್ಯಾಯಾಲಯವು ಅದನ್ನು ತಿರಸ್ಕರಿಸಿ ವಿಚಾರಣೆ ಹಾಜರಾಗಬೇಕು ಎಂದು ತಿಳಿಸಿತ್ತು. ಹಲವು ಬಾರಿ ಸಮನ್ಸ್‌ ನೀಡಿದರೂ ಹಾಜರಾಗದಿರುವುದಕ್ಕೆ ನ್ಯಾಯಾಲಯವು ಬೇಸರ ವ್ಯಕ್ತಪಡಿಸಿ ಮುಂದಿನ ವಿಚಾರಣೆ ಹಾಜರಾಗಬೇಕು ಎಂದು ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!