
ಬೆಂಗಳೂರು (ಮಾ. 23): ಕೊರೋನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಮಾ.31 ರ ವರೆಗೆ ಸರ್ಕಾರ ರಜೆ ಘೋಷಿಸಿದೆ.
ಈಗಾಗಲೇ ಒಂದರಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. 7ರಿಂದ 10ನೇ ತರಗತಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಅಲ್ಲದೆ, ಎಲ್ಲಾ ಕ್ಷೇತ್ರಗಳಲ್ಲಿ ಮನೆಯಿಂದ ಕೆಲಸ ಮಾಡಿಸುವುದು ಅಥವಾ ರಜೆ ಘೋಷಿಸಿರುವುದರಿಂದ ಶಿಕ್ಷಕರಿಗೂ ರಜೆ ನೀಡಬೇಕು ಎಂದು ಶಿಕ್ಷಕರ ಸಂಘಟನೆಗಳು ಒತ್ತಾಯ ಮಾಡಿದ್ದವು.
ಬೆಂಗಳೂರಲ್ಲಿ 120 ವರ್ಷದ ಹಿಂದೆಯೇ 3 ಸಾವಿರ ಜನರ ಬಲಿ ಪಡೆದಿತ್ತು ಈ ರೋಗ!
ಶಿಕ್ಷಕರ ಮನವಿಗೆ ಸ್ಪಂದಿಸಿರುವ ಸರ್ಕಾರ ಇದೀಗ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಕೂಡ ಮುಂದೂಡಿರುವುದರಿಂದ ಮಾ.31ರ ವರೆಗೆ ಬೋಧಕ, ಬೋಧಕೇತರ ಸಿಬ್ಬಂದಿಗೆ ರಜೆ ನೀಡಿದೆ. ಮನೆಯಿಂದಲೇ ಆನ್ಲೈನ್ ಮೂಲಕ ಬೋಧನೆ ಮತ್ತು ಆನ್ಲೈನ್ ಮೌಲ್ಯಮಾಪನಕ್ಕೆ ಅಗತ್ಯವಿರುವ ಪಠ್ಯವಸ್ತು ಅಭಿವೃದ್ಧಿಪಡಿಸುವುದು. ಮುಂದಿನ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ಪಠ್ಯ ಯೋಜನೆ, ಟಿಪ್ಪಣಿಯನ್ನು ಸಿದ್ಧಪಡಿಸುವುದು ಹಾಗೂ ತಾವು ಬೋಧಿಸುವ ವಿಷಯದ ಪಠ್ಯವಸ್ತುವನ್ನು ಅಭಿವೃದ್ಧಿಪಡಿಸುವಂತೆ ತಿಳಿಸಿದೆ.
ಶಿಕ್ಷಕರು ತಮ್ಮ ಕರ್ತವ್ಯವ ಕೇಂದ್ರ ಸ್ಥಾನ ಬಿಡಬಾರದು ಹಾಗೂ ಸರ್ಕಾರದ ಸೇವೆ ಅಗತ್ಯವಿದ್ದಾಗ ಕಡ್ಡಾಯವಾಗಿ ಬಳಸಿಕೊಳ್ಳಲಾಗುವುದು ಎಂದು ಸೂಚಿಸಿದ್ದಾರೆ. ರಜೆ ನೀಡಿರುವುದಕ್ಕೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣ ಸ್ವಾಮಿ ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜನಾಥ್ ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ