
ಬೆಂಗಳೂರು (ಮೇ.02): ರಾಜ್ಯದಲ್ಲಿ ಬೆಳಗ್ಗೆ 6 ರಿಂದ 10 ಗಂಟೆಗೆ ಸೀಮಿತವಾಗಿರುವ ಮದ್ಯ ಮಾರಾಟವನ್ನು ರಾತ್ರಿ 9 ಗಂಟೆವರೆಗೆ ವಿಸ್ತರಿಸಬೇಕು ಎಂದು ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯಷನ್ ಅಧ್ಯಕ್ಷ ಎಸ್. ಮರಿಸ್ವಾಮಿ, ಲಾಕ್ಡೌನ್ ಅವಧಿಯಲ್ಲಿ ಗಾರ್ಮೆಂಟ್ಸ್, ನಂದಿನಿ ಮಳಿಗೆ ಸೇರಿದಂತೆ ಹಲವರಿಗೆ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಇದ್ದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಲಾಕ್ಡೌನ್ ಮಾಡಿದಾಗಲೇ ಚಿಲ್ಲರೆ ಮದ್ಯ ಮಾರಾಟಗಾರರು ತೀವ್ರ ನಷ್ಟಅನುಭವಿಸಿದ್ದಾರೆ.
ಬೆಳ್ಳಂ ಬೆಳಗ್ಗೆಯೇ ಟೈಟ್ ಆಗಿ ನಡುರಸ್ತೆಯಲ್ಲಿ ಬಿದ್ದ ಕುಡುಕರು..! ...
ಇದೀಗ ಬೆಳಗ್ಗೆ ಮದ್ಯ ಖರೀದಿ ಮಾಡಲು ಗ್ರಾಹಕರು ಮುಜುಗರ ಅನುಭವಿಸುತ್ತಾರೆ. ಇದರಿಂದ ಮದ್ಯ ಮಾರಾಟಗಾರರಿಗೆ ಮತ್ತಷ್ಟುನಷ್ಟಉಂಟಾಗುತ್ತಿದೆ. ಕಾರಣ ಅವಧಿ ವಿಸ್ತರಿಸಿ ಎಂದು ಮನವಿ ಮಾಡಿದ್ದಾರೆ.
ಹೀಗಾಗಿ ಚಿಲ್ಲರೆ ಮದ್ಯ ಮಾರಾಟ ಸನ್ನದುದಾರರಿಗೆ ರಾತ್ರಿ 9 ಗಂಟೆವರೆಗೆ ಅಥವಾ ಸರ್ಕಾರಕ್ಕೆ ಸೂಕ್ತ ಎನಿಸುವ ಅವಧಿವರೆಗೆ ಕೇವಲ ಪಾರ್ಸೆಲ್ ನೀಡಲು ಅವಧಿ ವಿಸ್ತರಣೆ ಮಾಡಿ ಆದೇಶ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ