50 ವರ್ಷ ಮೇಲ್ಪಟ್ಟ ಇಲ್ಲಿನ ಸಿಬ್ಬಂದಿಗೆ ದಿನ ಬಿಟ್ಟು ದಿನ ಕೆಲಸ

By Kannadaprabha NewsFirst Published Apr 24, 2021, 9:06 AM IST
Highlights

ಕೊರೋನಾ ಮಹಾಮಾರಿ ಅಟ್ಟಹಾಸ ಜೋರಾಗಿದೆ. ಸಾವು ನೋವಿನ ಸಂಖ್ಯೆಯೂ ಅಧಿಕವಾಗುತ್ತಿದೆ. ಈ ನಿಟ್ಟಿನಲ್ಲಿ ಇಲ್ಲಿ ಕಾರ್ಯ ನಿರ್ವಹಿಸುವ 50 ವರ್ಷ ವಯಸ್ಸಿನ ಮೇಲ್ಪಟ್ಟ ಸಿಬ್ಬಂದಿಗೆ ದಿನಬಿಟ್ಟು ದಿನ ಕೆಲಸಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ. 

ಬೆಂಗಳೂರು (ಏ.24): ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 50 ವರ್ಷ ಮೇಲ್ಪಟ್ಟ ನೌಕರರು ದಿನ ಬಿಟ್ಟು ದಿನ ಕಚೇರಿಗೆ ಬರುವಂತೆ ಹಾಗೂ ಅದಕ್ಕಿಂತ ಕಡಿಮೆ ವಯಸ್ಸಿನವರು ಬೆಳಗ್ಗೆ 10ರಿಂದ ಸಂಜೆ 4 ರವರೆಗೆ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. 

ಕೋವಿಡ್‌ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಸಿಬ್ಬಂದಿಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪರಿಷತ್ತಿನಲ್ಲಿ ಸುಮಾರು 50 ಮಂದಿ ನೌಕರರು ಇದ್ದಾರೆ. 

ಕಸಾಪ ಚುನಾವಣೆಗೂ ಇನ್ನು ಸಾಮಾಜಿಕ ಜಾಲತಾಣ ಬಳಕೆ ...

ಆದರೆ ಈ ಆದೇಶ ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!