
ಬೆಂಗಳೂರು (ಏ.22): ವ್ಯಾಪಾಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ಸೋಂಕಿಗೆ ನಿಯಂತ್ರಣ ಹೇರುವ ಸಲುವಾಗಿ ಸರ್ಕಾರದ ಮಾರ್ಗಸೂಚಿಯಂತೆ ನಾಡಿನ ಪ್ರಮುಖ ದೇವಾಲಯಗಳ ಪ್ರವೇಶ ಬಂದ್ ಮಾಡಲಾಗಿದೆ.
ಮೈಸೂರಿನ ಚಾಮುಂಡೇಶ್ವರಿ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ, ಶೃಂಗೇರಿಯ ಶಾರದಾಂಬೆ, ಹೊರನಾಡಿನ ಅನ್ನಪೂರ್ಣೇಶ್ವರಿ, ಶಿರಸಿಯ ಮಾರಿಕಾಂಬಾ, ಗೋಕರ್ಣದ ಮಹಾಬಲೇಶ್ವರ, ಮುರುಡೇಶ್ವರ, ಹುಬ್ಬಳ್ಳಿಯ ಸಿದ್ಧಾರೂಢ ಮಠ, ವಿಜಯನಗರ ಜಿಲ್ಲೆಯ ಹಂಪಿ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಕಟೀಲು ದುರ್ಗಾ ಪರಮೇಶ್ವರಿ, ಬಾದಮಿಯ ಬನಶಂಕರಿ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಬುಧವಾರ ರಾತ್ರಿಯಿಂದಲೇ ಭಕ್ತರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಮತ್ತೆ 23 ಸಾವಿರ ಕೇಸ್.. ಬೆಂಗಳೂರಿನಲ್ಲಿ 13 ಸಾವಿರ.. ಜಿಲ್ಲೆಗಳ ಸ್ಥಿತಿ ಏನು?
ಹಲವೆಡೆ ಬುಧವಾರ ಬೆಳಗ್ಗೆಯಿಂದಲೇ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿತ್ತು. ದೇವಸ್ಥಾನಗಳಲ್ಲಿ ಎಂದಿನಂತೆ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಭಕ್ತರಿಗೆ ಪ್ರವೇಶ ನಿಷಿದ್ಧಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ