
ನವದೆಹಲಿ(ನ.04): ಅ.3-ನ.4ರ ಅವಧಿಯಲ್ಲಿ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಹಾಗೂ ಉತ್ತರ ಪ್ರದೇಶಗಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮಂತ್ರಾಲಯ ಹೇಳಿದೆ. ಇದೇ ವೇಳೆ ಕೇರಳ, ದೆಹಲಿ, ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಸೋಂಕು ಏರುಗತಿಯಲ್ಲಿ ಸಾಗಿದೆ ಎಂದು ಮಾಹಿತಿ ನೀಡಿದೆ.
ಕೊರೋನಾ ಅಂಕಿ ಅಂಶಗಳ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಕಳೆದ ಏಳು ವಾರಗಳ ಅವಧಿಯಲ್ಲಿ ಸೋಂಕಿತರು ಹಾಗೂ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ ಇಳಿಕೆಯಾಗಿದೆ. ಇದೇ ವೇಳೆ ದೈನಂದಿನ 90,346 ಕೇಸುಗಳು ಪತ್ತೆಯಾಗುತ್ತಿದ್ದರೇ, ಈಗ ಅದು 45,884ಕ್ಕೆ ಇಳಿದೆ. ಸಾವಿರಕ್ಕಿಂತ ಹೆಚ್ಚು ದಾಖಲಾಗುತ್ತಿದ್ದ ಸಾವಿನ ಸಂಖ್ಯೆ 500ಕ್ಕೆ ಇಳಿದಿದೆ. ಈ ವರೆಗೆ 11 ಕೋಟಿಗೂ ಅಧಿಕ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೇರಳ, ದೆಹಲಿಯಲ್ಲಿ ದಾಖಲೆ ಹೊಸ ಕೇಸ್
ಕಳೆದೊಂದು ವಾರದಿಂದ ದೇಶದಲ್ಲೇ ಅತಿ ಹೆಚ್ಚು ಕೊರೋನಾ ಕೇಸು ದಾಖಲಾಗುತ್ತಿರುವ ಪುಟ್ಟರಾಜ್ಯ ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ದೆಹಲಿಯಲ್ಲಿ ಮಂಗಳವಾರವೂ ಅದೇ ಸಂಪ್ರದಾಯ ಮುಂದುವರೆದಿದೆ. ನಿನ್ನೆ ಕೇರಳದಲ್ಲಿ ದೇಶದಲ್ಲೇ ಅತಿ ಹೆಚ್ಚು 6862 ಪ್ರಕರಣ ದಾಖಲಾಗಿದ್ದರೆ, ದೆಹಲಿಯಲ್ಲಿ ಈವರೆಗಿನ ಅತ್ಯಧಿಕ 6700 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ.
ದೆಹಲಿಯಲ್ಲಿ ಹಬ್ಬದ ಋುತು ಹಾಗೂ ವಾಯು ಮಾಲಿನ್ಯದ ನಡುವೆಯೇ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಮವಾರ ನಡೆಸಿದ 59,540 ಟೆಸ್ಟ್ಗಳ ಪೈಕಿ 6725 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿವೆ.
ಕೇರಳದಲ್ಲಿ 6862 ಹೊಸ ಪ್ರಕರಣಗಳೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4.50 ಲಕ್ಷಕ್ಕೆ ತಲುಪಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ